Advertisement

ಶಿರಸಿ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕಗೆ ಐಟಿ ಶಾಕ್‌ !

08:26 AM May 02, 2018 | Team Udayavani |

ಶಿರಸಿ: ಶಿರಸಿ-ಸಿದ್ದಾಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರ ನಿವಾಸದ ಮೇಲೆ ಮಂಗಳವಾರ ರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. 

Advertisement

ಅಯ್ಯಪ್ಪನಗರದಲ್ಲಿರುವ ನಿವಾಸಕ್ಕೆ ದಾಳಿ ನಡೆಸಿರುವ 8 ಕ್ಕೂ ಹೆಚ್ಚು ಅಧಿಕಾರಿಗಳು ಭೀಮಣ್ಣ ನಾಯ್ಕ ಸಮಕ್ಷಮದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬುಧವಾರ ಬೆಳಗ್ಗೆಯೂ ಪರಿಶೀಲನೆ ಮುಂದುವರಿದಿರುವುದಾಗಿ ವರದಿಯಾಗಿದೆ. 

ಐಟಿ ದಾಳಿ ವಿರುದ್ದ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ಸಾಮಾಜಿಕ ತಾಣಗಳಲ್ಲಿ  ಕಿಡಿ ಕಾರಿದ್ದು , ಶಿರಸಿ ಕ್ಷೇತ್ರದಲ್ಲಿ ಸೋಲಿನ ಭೀತಿಯಿಂದ ಬಿಜೆಪಿ ಈ ಕೆಲಸ ಮಾಡಿದೆ ಎಂದಿದ್ದಾರೆ. 

ಶಿರಸಿಯಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ  ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್‌ನ ಶಶಿಭೂಷಣ ಹೆಗಡೆ ಮತ್ತು ಭೀಮಣ್ಣ ನಾಯ್ಕ ಅವರ ನಡೆವೆ ಜಿದ್ದಾಜಿದ್ದಿನ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 

Advertisement

Udayavani is now on Telegram. Click here to join our channel and stay updated with the latest news.

Next