Advertisement

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಆಪ್ತ, ಎಂಎಲ್ ಸಿ ರಘು ಗೆ ಐಟಿ ಶಾಕ್

03:27 PM Mar 08, 2018 | Team Udayavani |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆಪ್ತ, ಕಾಂಗ್ರೆಸ್ ಎಂಎಲ್ ಸಿ ರಘು ಆಚಾರ್ ಮನೆ ಹಾಗೂ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಬೆಂಗಳೂರು ಹೊರವಲವಾದ ಸರ್ಜಾಪುರದಲ್ಲಿರುವ ರಘು ಆಚಾರ್ ಗೆ ಸೇರಿದ್ದ ಕಚೇರಿ ಮೇಲೆ ದೆಹಲಿಯಿಂದ ಆಗಮಿಸಿದ್ದ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆದರೆ ರಾಜ್ಯದ ಐಟಿ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಇಲ್ಲ ಎಂದು ವರದಿ ವಿವರಿಸಿದೆ.

ಅದೇ ರೀತಿ ಮಾರತ್ ಹಳ್ಳಿಯಲ್ಲಿರುವ ಮನೆ ಮೇಲೂ ದಾಳಿ ನಡೆಸಿದ್ದಾರೆನ್ನಲಾಗಿದೆ. ಅಧಿಕಾರಿಗಳು ದಾಖಲೆ, ಕಡತಗಳ ಪರಿಶೀಲನೆ ತೊಡಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next