Advertisement

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

02:37 PM May 01, 2024 | Team Udayavani |

ಯಾದಗಿರಿ: ರಾಜ್ಯದಲ್ಲಿ ಹಾಸನದ ಪೆನ್ ಡ್ರೈವ್ ಕಹಾನಿ ದಿನಕ್ಕೊಂದು ಸ್ಬರೂಪ ತಾಳುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುರಪುರದ ದೇವತ್ಕಲ್ ಗ್ರಾಮದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಕ್ಕೆ ಹೋಗಲು ಬಿಟ್ಟವರು ಯಾರು, ಇದರ ಹಿಂದೆ ಯಾರಿದ್ದಾರೆ ಎಲ್ಲವನ್ನೂ ಎಸ್. ಐ.ಟಿತನಿಖೆ ನಡೆಯುತ್ತಿದೆ ಎಂದು ಸಿಎಂ‌ ಸಿದ್ದರಾಮಯ್ಯನವರು ಹೇಳಿದರು.

ಸುರಪುರ ತಾಕೂಕಿನ ದೇವತ್ಕಲ್ ಗ್ರಾಮದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರ ಕಣ್ಣಿಗೆ ಇದೆಲ್ಲವೂ ಕಾಣಲಿಲ್ಲವಾ, ಪ್ರಜ್ವಲ್‌ ವಿದೇಶಕ್ಕೆ ಹೋಗುವಾಗ ಯಾರ ಧೈರ್ಯದಿಂದ ಹೋದನು, ಪಾಸ್ ಪೋರ್ಟ್, ವೀಸಾ ಕೊಟ್ಟವರು ಯಾರು? ಇದೆಲ್ಲವನ್ನೂ ಪ್ಲ್ಯಾನ್ ಮಾಡಿದವರು ದೇವೇಗೌಡರು ಎಂದು ಆರೋಪಸಿದರು.

ಎಸ್.ಐ.ಟಿಗೆ ಪ್ರಕರಣ ವಹಿಸಿದ್ದೇವೆ, ಯಾವುದೇ ಕಾರಣಕ್ಕೂ ತನಿಖೆಯಲ್ಲಿ ಮಧ್ಯ ಹೋಗುವುದಿಲ್ಲ. ತನಿಖೆಗೆ ಪೂರ್ಣ ಬೆಂಬಲ‌ ನೀಡುತ್ತೇವೆ ಹಾಗೂ ಎಸ್.ಐ.ಟಿಗೆ ಸ್ವತಃ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next