Advertisement

ಸೌಹಾರ್ದಯುತವಾಗಿ ಭಾರತ ಕಟ್ಟಿ

12:45 PM Jan 26, 2018 | Team Udayavani |

ಕಲಬುರಗಿ: ಇವತ್ತಿನ ದಿನಗಳಲ್ಲಿ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಆಲೋಚನೆ ಮಾಡಿ ಸೌಹಾರ್ದ ಭಾರತವನ್ನು ಕಟ್ಟುವ ಅಗತ್ಯವಿದೆ ಎಂದು ಉಪನ್ಯಾಸಕ ಹಾಗೂ ಹೈದ್ರಾಬಾದ ಕರ್ನಾಟಕ ಸರಕಾರಿ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ| ಶರಣಪ್ಪ ಸೈದಾಪುರ ಪ್ರತಿಪಾದಿಸಿದರು.

Advertisement

ಇಲ್ಲಿನ ಕನ್ನಡ ಸಾಹಿತ್ಯ ಸಂಘದಲ್ಲಿ ಗುರುವಾರ ಎಸ್‌ಎಫ್‌ಐ ಹಮ್ಮಿಕೊಂಡಿದ್ದ ಜಿಲ್ಲಾ ಅಧ್ಯಯನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. 

ಶಿಕ್ಷಣದ ಹಕ್ಕನ್ನು ತಳ ಸಮುದಾಯದಿಂದ ಕಸಿಯುವ ಮತ್ತು ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ನಡೆಯಬೇಕು.
ಏಕಂದರೆ ಎರಡೂ ಅಪಾಯದಲ್ಲಿವೆ. ಸಂವಿಧಾನವನ್ನು ಬದಲಿಸುವ ಮತ್ತು ಮೀಸಲಾತಿಯನ್ನು ತೆಗೆಯುವ ನಿಟ್ಟಿನಲ್ಲಿ
ಸಂಚುಗಳು ನಡೆದಿವೆ. ಇದನ್ನು ನಾವು ಈಗಲೇ ಹತ್ತಿಕ್ಕದಿದ್ದರೆ ಅಥವಾ ತಡೆಯದಿದ್ದರೆ ಮುಂದಿನ ದಿನಗಳಲ್ಲಿ ನಾವು ಇನ್ನಷ್ಟು ಅಪಾಯಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಸಂವಿಧಾನ ಉಳಿಸಿ ಭಾರತವನ್ನು ವೈಜ್ಞಾನಿಕವಾಗಿ ಕಟ್ಟಬೇಕಾದ ಅವಶ್ಯಕತೆ ಮತ್ತು ಅನಿವಾರ್ಯತೆ ಎರಡು ಇಂದಿನ ವಿದ್ಯಾರ್ಥಿ ಸಮುದಾಯದ ಮುಂದೆ ಇದೆ
ಎಂದರು. 

ಶಿಕ್ಷಕ ಎಚ್‌.ಎಂ. ತಳವಾರ ಮಾತನಾಡಿ, ಇಂದು ದೇಶದಲ್ಲಿ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಹಿಡಿತ ಸಾಧಿಸುವ ಕೆಲಸ ನಡೆಯುತ್ತಿದೆ. ಈ ಕೆಲಸಕ್ಕಾಗಿ ವಿದ್ಯಾರ್ಥಿ ಸಮುದಾಯವನ್ನು ಬಳಕೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಇಲ್ಲದ ಆಲೋಚನೆಗಳನ್ನು ಹುಟ್ಟಿಸಲಾಗುತ್ತಿದೆ. ಕೋಮುವಾದಿ ಭಾವನೆಗಳಿಗೆ ವಿದ್ಯಾರ್ಥಿಗಳು ಕಿವಿಗೊಡಬೇಡಿ. ಇದರಿಂದ ನಿಮ್ಮ ಭವಿಷ್ಯ ಹಾಳು ಮಾಡಲಾಗುತ್ತಿದೆ. ಈಗ ಏನಿದ್ದರೂ ಶಿಕ್ಷಣಕ್ಕೆ, ಕಲಿಕೆಗೆ ಒತ್ತು ನೀಡಿ. ಇದರಿಂದ ನೀವು ಬೆಳೆಯಲು ಸಾಧ್ಯವಾಗುತ್ತದೆ. ಇಲ್ಲದೆ ಹೋದರೆ ನೀವು ಮುಂದೆ ಸಮಾಜದ ಹಾಗೂ ದೇಶದ ಮುಂದೆ ಪ್ರಶ್ನೆಯಾಗಿ ನಿಲ್ಲುತ್ತಿರಿ ಎಂದರು.

ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಶಿಕ್ಷಣದ ಮಹತ್ವ ಹಾಳಾಗುತ್ತಿದೆ. ವಿದೇಶಿಗರಿಗೆ ಹಾಗೂ ಸಂಸ್ಥೆಗಳಿಗೆ ರತ್ನಗಂಬಳಿ ಹಾಸಿ ಕರೆಯಲಾಗುತ್ತಿದೆ. ಶಿಕ್ಷಣ ಹೆಸರಿನಲ್ಲಿ ವ್ಯಾಪಾರೀಕರಣ ನಡೆದಿದೆ. ನಮ್ಮ ಶಿಕ್ಷಣ ಅಭಿವೃದ್ಧಿ ಆಗಬೇಕಾದರೆ ಗುಲಾಮಗಿರಿ ತೊಲಗಬೇಕಾದರೆ ಕೋಠಾರಿ ಆಯೋಗದ ಶಿಫಾರಸುಗಳು ಜಾರಿಗೆ ಬರಬೇಕು ಎಂದರು. 

Advertisement

ಅಧ್ಯಕ್ಷತೆ ವಹಿಸಿದ್ದ ಸುನೀಲ ಮಾನ್ಪಡೆ ಮಾತನಾಡಿ, ಹೈಕ ಭಾಗಕ್ಕೆ 371 (ಜೆ)ನೇ ಕಲಂ ಜಾರಿ ಏನೋ ಮಾಡಲಾಗಿದೆ. ಇದು ಸರಿಯಾಗಿ ಜಾರಿಗೆ ಬರಬೇಕಾದರೆ ಸರಕಾರದ ಇಚ್ಛಾಶಕ್ತಿ ಕೊರತೆ ಇದೆ. ಅದನ್ನು ಮಾಡುವಲ್ಲಿ ಸರಕಾರ ಸೋತಿದೆ. ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವ ಧ್ವನಿ ಎತ್ತುವ ಯಾರೇ ಆಗಿರಲಿ ಅವರನ್ನು ಶಿಕ್ಷೆಗೆ ಗುರಿ ಮಾಡುವಂತಹ ಕಾನೂನಿನ ಅವಶ್ಯತೆ ಇದೆ. ಇಲ್ಲದೆ ಹೋದರೆಯುವ ಜನತೆ ಇದಕ್ಕೂ ಉತ್ತರವನ್ನು ಕಂಡುಕೊಳ್ಳಬೇಕಾಗಿದೆ ಎಂದರು.

ಎಸ್‌ಎಫ್‌ಐ ಸಂಘಟಕರಾದ ಅಪೂರ್ವಲಾಲ್‌ ನದಾಫ್‌, ಶಂಕರ ಕವಲಗಿ ಸ್ವಾಗತಿಸಿದರು. ರಾಮಲಿಂಗ ಬಿರಾದಾರ
ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.  

Advertisement

Udayavani is now on Telegram. Click here to join our channel and stay updated with the latest news.

Next