Advertisement

ಇದು ಹೊಸ “ಎಡಕಲ್ಲು ಗುಡ್ಡದ ಮೇಲೆ’

02:52 PM Mar 09, 2018 | |

ಶ್ರೀ ಸಾಯಿಸಿದ್ದಿ ಪ್ರೊಡಕ್ಷನ್‌ ಲಾಂಛನದಲ್ಲಿ ಜಿ.ಪಿ.ಪ್ರಕಾಶ್‌ ಅವರು ನಿರ್ಮಿಸುತ್ತಿರುವ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ರಾಜೇಶ್‌ ರಾಮನಾಥ್‌ ಸ್ಟುಡಿಯೋದಲ್ಲಿ ಹಿನ್ನಲೆ ಸಂಗೀತ ಅಳವಡಿಸಲಾಗುತ್ತಿದೆ. ಮೈಸೂರು, ಚಿಕ್ಕಮಗಳೂರು, ಉಡುಪಿ, ಬೆಂಗಳೂರು ಮುಂತಾದ ಕಡೆ ಚಿತ್ರಕ್ಕೆ ನಲವತ್ತೆ„ದು ದಿನಗಳ ಚಿತ್ರೀಕರಣ ನಡೆದಿದೆ.

Advertisement

ದಿನದ ಹೆಚ್ಚಿನ ಪಾಲು ಉದ್ಯೋಗದಲ್ಲೇ ಕಳೆಯುವ ಅಪ್ಪ-ಅಮ್ಮನ ಪ್ರೀತಿಯಿಂದ ವಂಚಿತಳಾದ ಹೆಣ್ಣು ಮಗಳೊಬ್ಬಳ ಜೀವನದ ಕುರಿತ ಕಥಾ ಹಂದರವುಳ್ಳ ಈ ಚಿತ್ರಕ್ಕೆ ವಿವಿನ್‌ ಸೂರ್ಯ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದೊಂದು ಮಹಿಳಾ ಪ್ರಧಾನ ಹಾಗೂ ಕೌಟುಂಬಿಕ ಚಿತ್ರವೆನ್ನುವ ನಿರ್ದೇಶಕರು ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದೆ ಎಂದು ತಿಳಿಸಿದ್ದಾರೆ. ಆಶಿಕ್‌ ಅರುಣ್‌ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಶಂಕರ್‌ ಅವರ ಛಾಯಾಗ್ರಹಣವಿದೆ.

ವಿಜಯ್‌ ಎಂ ಕುಮಾರ್‌ ಸಂಕಲನ ಹಾಗೂ ಸದಾ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಭಾರತಿ ವಿಷ್ಣುವರ್ಧನ್‌, ಎಡಕಲ್ಲು ಗುಡ್ಡ ಚಂದ್ರಶೇಖರ್‌, ಶ್ರೀನಾಥ್‌, ಸುಮಿತ್ರ, ದತ್ತಣ್ಣ, ಮುಗೂರು ಸುರೇಶ್‌, ಚಿದಾನಂದ್‌, ಭವ್ಯಶ್ರೀ ರೈ, ಜ್ಯೋತಿ ರೈ, ವೀಣಾ ಸುಂದರ್‌, ಲಕ್ಷ್ಮೀ ಸಿದ್ದಯ್ಯ, ಪದ್ಮಜಾರಾವ್‌, ಸಿಹಿಕಹಿ ಚಂದ್ರು, ರವಿ ಭಟ್‌, ಉಷಾ ಭಂಡಾರಿ, ಧರ್ಮೆಂದ್ರ, ಸ್ವಾತಿ ಶರ್ಮ, ಪ್ರಗತಿ, ವೈಭವಿ, ಮೇಘನ, ನಕುಲ್‌ ಮುಂತಾದವರಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next