Advertisement

ಋತುಸ್ರಾವದ ರಜೆ: ಪಿಐಎಲ್‌ ತಿರಸ್ಕೃತ

11:51 PM Feb 24, 2023 | Team Udayavani |

ನವದೆಹಲಿ: ಋತುಸ್ರಾವದ ನೋವಿರುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಮತ್ತು ಮಹಿಳಾ ಉದ್ಯೋಗಿಗಳಿಗೆ ರಜೆ ನೀಡುವ ಕುರಿತು ಸಲ್ಲಿಸಲಾಗಿದ್ದ ಪಿಐಎಲ್‌ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಅನ್ನು ಸರ್ವೋಚ್ಚ ಪೀಠ ಪರಿಗಣಿಸಿಲ್ಲ.

Advertisement

ಇದು ಸರ್ಕಾರದ ಅಧಿಕಾರದ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಈ ಅರ್ಜಿಯನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯಕ್ಕೆ ಸಲ್ಲಿಸಬೇಕು ಎಂದು ಸರ್ವೋಚ್ಚ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.

ಈ ಬಗ್ಗೆ ದೆಹಲಿ ನಿವಾಸಿ ಶೈಲೇಂದ್ರಮಣಿ ತ್ರಿಪಾಠಿ ಪಿಐಎಲ್‌ ಸಲ್ಲಿಸಿ, 1961ರ ಮಾತೃತ್ವ ಸೌಲಭ್ಯ ಕಾಯ್ದೆಯನುಸಾರ ಕರ್ತವ್ಯ ನಿರ್ವಹಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next