Advertisement

“ರಾಜೀನಾಮೆ ಸಲ್ಲಿಸಿದ್ದು ನೋವಾಗಿದೆ’

11:32 PM Jul 10, 2019 | Lakshmi GovindaRaj |

ಬೆಂಗಳೂರು: “ಸಮಯ ಮತ್ತು ಸಂದರ್ಭಕ್ಕೆ ಅನುಗುಣವಾಗಿ ರಾಜೀನಾಮೆ ಸಲ್ಲಿಸುವ ಪರಿಸ್ಥಿತಿ ಬಂದಿದೆ. ನನಗೆ ಬಹಳ ದಿನದಿಂದ ಮೈತ್ರಿ ಸರ್ಕಾರದ ಬಗ್ಗೆ ಬೇಸರ ಆಗಿತ್ತು ಎಂದು ಕಾಂಗ್ರೆಸ್‌ ಶಾಸಕ ಎಂಬಿಟಿ ನಾಗರಾಜ್‌ ಹೇಳಿದರು.

Advertisement

ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಮೂವತ್ತು ನಲವತ್ತು ವರ್ಷದಿಂದ ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿಯಾಗಿದ್ದೆ. ನಗರಸಭೆ ಸದಸ್ಯನಾಗಿ ಮೂರು ಸಾರಿ ಶಾಸಕನಾಗಿ ಸಚಿವನಾಗಿದ್ದೇನೆ. ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ. ನಮ್ಮ ಮನೆಯೇ ಕಾಂಗ್ರೆಸ್‌. ನಾವು ಹೋರಾಟ ಮಾಡಿ ಬೆಳೆದು ಬಂದಿದ್ದೇವೆ.

ನಾವು ಕಾಂಗ್ರೆಸ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದು ನೋವಾಗಿದೆ. ಮೈತ್ರಿ ಸರ್ಕಾರದಲ್ಲಿ ಉಸಿರುಗಟ್ಟಿದ ವಾತಾವರಣದಲ್ಲಿ ನಾವಿದ್ದೇವು. ಹೀಗಾಗಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ನಾವು ಯಾವುದೇ ಆಮಿಷಕ್ಕೆ ಒಳಗಾಗಿಲ್ಲ. ನಾವು ಎಲ್ಲಿಯೂ ಹೋಗುವುದಿಲ್ಲ. ಮುಂದಿನ ನಡೆ ಬಗ್ಗೆ ಇನ್ನೆರಡು ದಿನದಲ್ಲಿ ಸ್ಪಷ್ಟಪಡಿಸುತ್ತೇನೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next