Advertisement

ಆಡಂ ಕುದ್ರುವಿನಲ್ಲಿ ಐವನ್‌ ಡಿ’ಸೋಜಾ ಮತಯಾಚನೆ

10:51 AM May 10, 2018 | |

ಮಹಾನಗರ: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಆಡಂ ಕುದ್ರುವಿನಲ್ಲಿ ಸರಕಾರಿ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಅವರು ಮನೆ-ಮನೆಗೆ ತೆರಳಿ ಕಾಂಗ್ರೆಸ್‌ ಪರ ಹಾಗೂ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್‌. ಲೋಬೋ ಪರ ಮತಯಾಚನೆ ಮಾಡಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಸಚೇತಕರು, ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದು 5 ವರ್ಷಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಭಿವೃದ್ಧಿ ಕಾರ್ಯಗಳನ್ನು ಈ ಚುನಾವಣೆಯಲ್ಲಿ ಪ್ರಮುಖ ವಿಚಾರವಾಗಿ ಪರಿಗಣಿಸಿ ಮತಚಲಾಯಿಸಿ ಕಾಂಗ್ರೆಸ್‌ನ ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬರುವಂತೆ ಮಾಡಬೇಕು. ಜೆ.ಆರ್‌. ಲೋಬೋ ಅವರು ಮಾಡಿದ ಹಲವಾರು ಜನಪರ ಕಾರ್ಯಕ್ರಮಗಳು ಈ ಚುನಾವಣೆಯಲ್ಲಿ ಪರಿಗಣನೆಯಾಗಲಿದೆ ಎಂದು ತಿಳಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂತೋಷ್‌ ಶೆಟ್ಟಿ, ಉಸ್ಮಾನ್‌ ಕಲ್ಲಡ್ಕ, ಪಿಯೂಸ್‌ ಮೊಂತೆರೋ ಹಾಗೂ ಹಲವಾರು ಕಾಂಗ್ರೆಸ್‌ ಕಾರ್ಯಕರ್ತರು ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next