Advertisement

Ivan D’Souza ವಿರುದ್ಧ ನ್ಯಾಯಾಲಯದ ಮೊರೆ: ಭರತ್‌ ಶೆಟ್ಟಿ

01:23 AM Aug 23, 2024 | Team Udayavani |

ಮಂಗಳೂರು: ರಾಜ್ಯಪಾಲರ ವಿರುದ್ಧ ಐವನ್‌ ಡಿ’ ಸೋಜಾ ನೀಡಿದ ವಿವಾದಿತ ಹೇಳಿಕೆ ಬಗ್ಗೆ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಶಾಸಕ ಡಾ| ಭರತ್‌ ಶೆಟ್ಟಿ ಹೇಳಿದರು.

Advertisement

ಪೊಲೀಸರು ಎಫ್‌ಐಆರ್‌ ದಾಖಲಿಸುವ ಯಾವುದೇ ನಂಬಿಕೆ ನಮಗೆ ಇಲ್ಲ, ಹಾಗಾಗಿ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಚರ್ಚಿಸಲಾಗುತ್ತಿದೆ. ಇದು ಸಣ್ಣ ಪ್ರಕರಣವಲ್ಲ. ಪೊಲೀಸರು ಪ್ರಕರಣ ದಾಖಲಿಸುತ್ತಾರೆಂದು ಕಾದಿದ್ದೆವು. ಪೊಲೀಸರಿಗೆ ಆ ಧೈರ್ಯ ಇಲ್ಲ. ಈ ಕುರಿತು ಕೇಳಿದರೆ ಅನುಮತಿಗೆ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.

ಹೈಕೋರ್ಟ್‌ನ ಹಿರಿಯ ನ್ಯಾಯವಾದಿಗಳ ಜತೆ ಚರ್ಚಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next