Advertisement

ಕೇಂದ್ರದ ಕೆಲವು ಧೋರಣೆಗಳಿಂದ ಪ್ರಾದೇಶಿಕತೆಗೆ ಧಕ್ಕೆ

03:37 PM Mar 28, 2021 | Team Udayavani |

ಮೈಸೂರು: ಕೇಂದ್ರ ಸರ್ಕಾರ ಕೆಲವು ಧೋರಣೆಗಳುಪ್ರಾದೇಶಿಕತೆಗೆ ಧಕ್ಕೆಯಾಗುತ್ತಿದ್ದು, ಇದರಿಂದ ಒಕ್ಕೂಟವ್ಯವಸ್ಥೆ ಸಡಿಲವಾಗುತ್ತಿದೆ ಎಂದು ಸಣ್ಣ ನೀರಾವರಿ ಸಚಿವಜೆ.ಸಿ.ಮಾಧುಸ್ವಾಮಿ ತಮ್ಮದೇ ಪಕ್ಷದ ವಿರುದ್ಧ ಬೇಸರವ್ಯಕ್ತಪಡಿಸಿದರು.

Advertisement

ನಗರದ ಜೆಎಸ್‌ಎಸ್‌ ಮಹಿಳಾಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ನಗರ ಘಟಕದಿಂದ ಬಿ.ಎಸ್‌.ಸಿದ್ದಲಿಂಗಶೆಟ್ಟರದತ್ತಿ, ಸಿದ್ದಮ್ಮಣ್ಣಿ ಸಿದ್ದಲಿಂಗಶೆಟ್ಟರ ದತ್ತಿ,ಸಿದ್ದನಂಜಪ್ಪ ದತ್ತಿ, ಶಾಂತಾದೇವಿ ಸಿದ್ದನಂಜಪ್ಪದತ್ತಿಯಿಂದ ರಾಷ್ಟ್ರೀಯ ಐಕ್ಯತೆ ಮತ್ತುಪ್ರಾದೇಶಿಕ ಸ್ವಾತಂತ್ರ್ಯ ವಿಷಯದ ಬಗ್ಗೆ ಶನಿವಾರ ನಡೆದರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರುಮಾತನಾಡಿದರು.

ಕೇಂದ್ರ ಸರ್ಕಾರದ ಕೇಂದ್ರೀಕರಣ ಧೋರಣೆಯಿಂದದೇಶದಲ್ಲಿ ಪ್ರಾದೇಶಿಕತೆ ಕಾವು ಹೆಚ್ಚಾಗುತ್ತಿದೆ. ರಾಜ್ಯದಪಟ್ಟಿಯಲ್ಲಿರುವ ಇಲಾಖೆಗಳು ನಿಧಾನವಾಗಿ ಕೇಂದ್ರದವಶವಾಗುತ್ತಿದ್ದು, ಎಲ್ಲವೂ ವಿಕೇಂದ್ರೀಕರಣ ಆಗುವಬದಲು ಕೇಂದ್ರೀಕರಣವಾಗುತ್ತಿದೆ. ಸರ್ವಾಧಿಕಾರಿಧೋರಣೆಯಿಂದ ಎಂದಿಗೂ ಪ್ರಾದೇಶಿಕ ಸ್ವಾತಂತ್ರ್ಯಕ್ಕೆಒಳಿತಾಗುವುದಿಲ್ಲ. ಅಲ್ಲದೆ, ಕೇಂದ್ರ ಸರ್ಕಾರದ ಸಾಕಷ್ಟುಯೋಜನೆಗಳು ಉತ್ತಮ ಪರಿಸ್ಥಿತಿಯಲ್ಲಿರುವವರಿಗೆಮತ್ತಷ್ಟು ಸೌಲಭ್ಯಗಳನ್ನು ನೀಡುವಂತಿದೆ ಎಂದುಹೇಳಿದರು.ಸ್ವಾತಂತ್ರ್ಯ ಬಂದಾಗ 16 ರಾಜ್ಯಗಳಿದ್ದವು. ಆದರೆ, ಈಗ29 ರಾಜ್ಯಗಳಿವೆ. ಎಲ್ಲ ರಾಜ್ಯಗಳಲ್ಲಿಯೂ ಅಭಿವೃದ್ಧಿಒಂದೆರಡು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿರುವಕಾರಣ ಮಿಕ್ಕ ಜಿಲ್ಲೆಗಳು ಬೇರೆ ರಾಜ್ಯ ಕೇಳುತ್ತಿವೆ. ಉತ್ತರಕರ್ನಾಟಕ ವಿಚಾರದಲ್ಲಿಯೂ ಇದೇ ಆಗಿದೆ, ತೆಲಂಗಾಣರಾಜ್ಯ ಸೃಷ್ಟಿಯಾಗಲೂ ಇದೇ ಕಾರಣ ಎಂದು ಹೇಳಿದರು.

ಕೇಂದ್ರ ಸರ್ಕಾರ ಮನೆಯ ಹಿರಿಯ ಸದಸ್ಯನಂತೆವರ್ತಿಸಬೇಕು. ಆದರೆ, ಲಭ್ಯ ಸಂಪನ್ಮೂಲ ಹಂಚಿಕೆಮಾಡುವಲ್ಲಿ ವಿಫ‌ಲವಾಗಿದೆ. ಇದೆಲ್ಲ ದೆಹಲಿಯಪ್ರಭುಗಳಿಗೆ ಅರ್ಥವಾಗುತ್ತಿಲ್ಲ. ಒಕ್ಕೂಟ ವ್ಯವಸ್ಥೆಗೂ ಶಕ್ತಿತುಂಬುವಲ್ಲಿ ಕೂಡ ಸೋತಿದೆ ಎಂದು ವಿಷಾದವ್ಯಕ್ತಪಡಿಸಿದರು. ಎಂಎಲ್‌ಸಿ ಎನ್‌.ರವಿಕುಮಾರ್‌,ಸಂಸದ ತೇಜಸ್ವಿ ಸೂರ್ಯ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next