Advertisement

ನದಿಗೆ ಉರುಳಿ ಬಿದ್ದ ಐಟಿಬಿಪಿ ಸಿಬ್ಬಂದಿಗಳನ್ನು ಹೊತ್ತೊಯ್ದ ಬಸ್ : 6 ಮಂದಿ ಸಾವು

01:43 PM Aug 16, 2022 | Team Udayavani |

ಶ್ರೀನಗರ : 37 ಮಂದಿ ಐಟಿಬಿಪಿ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ತಾಂತ್ರಿಕ ಸಮಸ್ಯೆಯಿಂದ ನದಿ ಉರುಳಿ ಬಿದ್ದು ಸುಮಾರು ಆರು ಮಂದಿ ಸಿಬ್ಬಂದಿಗಳು ಸಾವನ್ನಪ್ಪಿದ್ದು ಉಳಿದವರು ಗಂಭೀರ ಗಾಯಗೊಂಡಿರುವ ಘಟನೆ ಪಹಲ್ ಗಾಮ್ ನಲ್ಲಿ ಸಂಭವಿಸಿದೆ.

Advertisement

ಘಟನೆಯಲ್ಲಿ ಆರು ಐಟಿಬಿಪಿ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟರೆ, 10 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಐಟಿಬಿಪಿ ಸಿಬ್ಬಂದಿ ಮತ್ತು ಇಬ್ಬರು ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಎಲ್ಲರೂ ಅಮರನಾಥದಲ್ಲಿ ಕರ್ತವ್ಯ ಮುಗಿಸಿಕೊಂಡು ಪಾಲ್ಗಾಮ್‌ಗೆ ಮರಳುತ್ತಿದ್ಗ ವೇಳೆ ಬಸ್ಸಿನ ಬ್ರೇಕ್ ವೈಫಲ್ಯಗೊಂಡು ಈ ಘಟನೆ ಸಂಭವಿಸಿದೆ .

ಗಂಭೀರ ಗಾಯಗೊಂಡವರನ್ನು ಏರ್ ಲಿಫ್ಟ್ ಮೂಲಕ ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ.  ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ಸಂಪೂರ್ಣ ನುಜ್ಜು ಗುಜ್ಜಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next