Advertisement

ಫೆ.20ರಂದು ಜೆ.ಪಿ.ನಡ್ಡಾ ಪ್ರವಾಸ: ಉಡುಪಿ ಜಿಲ್ಲಾ ಬಿಜೆಪಿ ಬೂತ್‌ ಸಮಾವೇಶಕ್ಕೆ ಚಪ್ಪರ ಮಹೂರ್ತ

08:16 PM Feb 17, 2023 | Team Udayavani |

ಉಡುಪಿ: ಎಂಜಿಎಂ ಕಾಲೇಜು ಮೈದಾನದಲ್ಲಿ ಫೆ.20ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರವರ ನೇತೃತ್ವದಲ್ಲಿ ನಡೆಯಲಿರುವ ಬೂತ್‌ ಸಮಿತಿ ಸಮಾವೇಶಕ್ಕೆ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ರವರು ಚಪ್ಪರ ಮುಹೂರ್ತ ನೆರವೇರಿಸಿದರು.

Advertisement

ಶಾಸಕ ಕೆ.ರಘುಪತಿ ಭಟ್‌, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್‌ ಶೆಟ್ಟಿ, ವಿಭಾಗ ಸಂಘಟನ ಪ್ರ. ಕಾರ್ಯದರ್ಶಿ ಪ್ರಸಾದ್‌ ಕುಮಾರ್‌, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್‌ ಶೆಟ್ಟಿ, ಮನೋಹರ್‌ ಎಸ್‌. ಕಲ್ಮಾಡಿ, ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್‌ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಸಹ ವಕ್ತಾರರಾದ ಶಿವಕುಮಾರ್‌ ಅಂಬಲಪಾಡಿ, ಪ್ರತಾಪ್‌ ಶೆಟ್ಟಿ ಚೇರ್ಕಾಡಿ, ಗಿರೀಶ್‌ ಎಂ. ಅಂಚನ್‌, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್‌ ಶೆಟ್ಟಿ ಕಟಪಾಡಿ, ಅಲ್ಪಸಂಖ್ಯಾಕ ಮೋರ್ಚಾ ಅಧ್ಯಕ್ಷ ದಾವೂದ್‌ ಅಬೂಬಕ್ಕರ್‌, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್‌ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಹ ಸಂಚಾಲಕ ಡಾ| ವಿದ್ಯಾಧರ ಶೆಟ್ಟಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರ ಸಂಚಾಲಕ ಕಿಶೋರ್‌ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಶಿವನ ತಾಣ ಮುರ್ಡೇಶ್ವರದಲ್ಲಿ ಶಿವರಾತ್ರಿ ವೈಭವ: ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ

Advertisement

Udayavani is now on Telegram. Click here to join our channel and stay updated with the latest news.

Next