Advertisement

ಸಿದ್ಧಾರೂಢ-ಮೂರುಸಾವಿರ ಮಠಕ್ಕೆ J.P ನಡ್ಡಾ ಭೇಟಿ

11:42 PM Apr 19, 2023 | Team Udayavani |

ಹುಬ್ಬಳ್ಳಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬುಧವಾರ ನಗರದ ಸಿದ್ಧಾರೂಢಸ್ವಾಮಿ ಹಾಗೂ ಮೂರುಸಾವಿರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಮೊದಲು ಸಿದ್ಧಾರೂಢಸ್ವಾಮಿ, ಗುರುನಾಥರೂಢ ಸ್ವಾಮಿಗಳ ದರ್ಶನ ಪಡೆದ ಬಳಿಕ ಮೂರುಸಾವಿರಮಠಕ್ಕೆ ಭೇಟಿ ನೀಡಿ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಸ್ವಾಮಿಗಳೊಂದಿಗೆ ಒಂದೆರಡು ನಿಮಿಷ ಗೌಪ್ಯವಾಗಿ ಮಾತುಕತೆ ನಡೆಸಿದರು. ಈ ವೇಳೆ ಹು-ಧಾ. ಕೇಂದ್ರ ವಿಧಾನಸಭಾ ಕ್ಷೇತ್ರದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯಿತೆಂದು ಹೇಳಲಾಗುತ್ತಿದೆ.

Advertisement

ಮಠದಿಂದ ಹೊರಬಂದ ನಡ್ಡಾ ಅವರು ಸುದ್ದಿಗಾರರು ಜಗದೀಶ ಶೆಟ್ಟರ್‌ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಹು-ಧಾ. ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಅರವಿಂದ ಬೆಲ್ಲದ, ಬಿಜೆಪಿ ಧಾರವಾಡ ವಿಭಾಗದ ಪ್ರಭಾರಿ ಲಿಂಗರಾಜ ಪಾಟೀಲ್‌, ಮಾಜಿ ಶಾಸಕ ಅಶೋಕ ಕಾಟವೆ, ಪ್ರಭು ನವಲಗುಂದಮಠ, ಪ್ರಕಾಶ ಶೃಂಗೇರಿ, ರಾಜು ಜರತಾರಘರ, ಮುರಗೇಶ ಯಕಲಾಸಪೂರ ಇತರರಿದ್ದರು.

ಕಾಂಗ್ರೆಸ್‌ ನಾಯಕರಿಂದಲೂ ಮಠಕ್ಕೆ ಭೇಟಿ

ಕಾಂಗ್ರೆಸ್‌ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಮತ್ತು ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಅವರು ಹು-ಧಾ. ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ನಾಮಪತ್ರ ಸಲ್ಲಿಸುವ ಮುನ್ನ ಮೂರುಸಾವಿರಮಠಕ್ಕೆ ಭೇಟಿ ನೀಡಿ ಗುರುಸಿದ್ದೇಶ್ವರ ಮಹಾಶಿವಯೋಗಿಗಳ ಕತೃì ಗದ್ದುಗೆ ದರ್ಶನ ಪಡೆದರು. ಅನಂತರ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಅವರೊಂದಿಗೆ ಸುಮಾರು ಐದು ನಿಮಿಷ ಗೌಪ್ಯವಾಗಿ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next