Advertisement

ಯಾವ ದೂರೂ ಬಂದಿಲ್ಲ: ಜಾಕ್ವೆಲಿನ್‌ ಪರ ವಕೀಲ

06:29 PM Aug 18, 2022 | Team Udayavani |

ಮುಂಬೈ: ಬೆಂಗಳೂರು ಮೂಲದ ವಂಚಕ ಸುಕೇಶ್‌ ಚಂದ್ರಶೇಖರ್‌ ಅವರ 215 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಬಾಲಿವುಡ್‌ ನಟಿ ಜಾಕ್ವೆಲಿನ್‌ ಅವರನ್ನು ಜಾರಿ ನಿರ್ದೇಶನಾಲಯ ಆರೋಪಿ ಎಂದು ಹೆಸರಿಸಿದ ಬೆನ್ನಲ್ಲೇ ನಟಿ ಪರ ವಕೀಲರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Advertisement

“ಈ ರೀತಿಯ ವರದಿಗಳು ಸುದ್ದಿ ಮಾಧ್ಯಮಗಳಲ್ಲಿ ಬಂದಿವೆಯೇ ಹೊರತು ಜಾಕ್ವೆಲಿನ್‌ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದಾಗಲೀ ಅಥವಾ ನ್ಯಾಯಾಲಯದಿಂದಾಗಿ ಯಾವುದೇ ದೂರು ಬಂದಿಲ್ಲ’ ಎಂದು ವಕೀಲರು ತಿಳಿಸಿದ್ದಾರೆ.

“ಜಾಕ್ವೆಲಿನ್‌ ಅವರು ಈ ಪ್ರಕರಣದಲ್ಲಿ ಸಂತ್ರಸ್ತೆಯಾಗಿದ್ದಾರೆ. ನಾವು ಇ.ಡಿ. ಸಲ್ಲಿಸಿರುವ ಆರೋಪ ಪಟ್ಟಿಯ ಪ್ರತಿಯನ್ನು ಕೇಳಿ ಪಟಿಯಾಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದೇವೆ’ ಎಂದೂ ವಕೀಲರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next