Advertisement

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

03:35 PM Apr 17, 2024 | Team Udayavani |

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಬೃಹತ್ ಮೆರವಣಿಗೆ ಮೂಲಕ ಬುಧವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

Advertisement

ನಗರದ ಸಮಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಜಗದೀಶ್ ಶೆಟ್ಟರ್ ಅಲ್ಲಿಂದ ಮೆರವಣಿಗೆ ಆರಂಭಿಸಿದರು. ಅಭಿಮಾನಿಗಳ ಜಯ ಘೊಷ ಮುಗಿಲು ಮುಟ್ಟಿತ್ತು. ವಿವಿಧ ಭಾಗದಿಂದ ಬಂದಿದ್ದ ಸಾವಿರಾರು ಕಾರ್ಯಕರ್ತರು ಮೋದಿ ಮೋದಿ ಎಂಬ ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮೆರವಣಿಗೆಯಲ್ಲಿ ವಢೋಲ್ ತಾಶ್, ಡೊಳ್ಳು ಕುಣಿತ ವಾದ್ಯಗಳು ಎಲ್ಲರ ಗಮನ ಸೆಳೆಯಿತು.‌ ವಿವಿಧ ಭಾಗದಿಂದ ಬಂದಿದ ಜನರು ವಾದ್ಯಗಳೊಂದಿಗೆ ಕುಣಿದು ಕುಪ್ಪಳಿಸಿದರು.‌ ಕೇಸರಿ ಪೇಟ ಧರಿಸಿದ ಸಾವಿರಾರು ಮಹಿಳೆಯರು ಮೆರವಣಿಗೆಯಲ್ಲಿ ಗಮನ ಸೆಳೆದರು.‌

ನಾಮಪತ್ರ ಸಲ್ಲಿಕೆಗೆ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ, ದುರ್ಯೋಧನನ ಐಹೊಳೆ, ವಿಧಾನ ಪರಿಷತ್ ಸದಸ್ಯ ಹನಂಮತ್ ನಿರಾಣಿ. ಮಾಜಿ ಶಾಸಕರಾದ ಅನಿಲ ಬೆನಕೆ, ಮಾಜಿ ಸಚಿವ ಮುರಗೇಶ್ ನಿರಾಣಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮೊದಲಾದವರು ಸಾಥ್ ನೀಡಿದರು.

ಇದನ್ನೂ ಓದಿ: Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Advertisement
Advertisement

Udayavani is now on Telegram. Click here to join our channel and stay updated with the latest news.

Next