Advertisement

ಕುಮಟಳ್ಳಿ ಬಗ್ಗೆ ಜಾರಕಿಹೊಳಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವುದು ಬೇಡ: ಶೆಟ್ಟರ್

10:10 AM Feb 24, 2020 | keerthan |

ಮೈಸೂರು: ರಮೇಶ್ ಜಾರಕಿಹೊಳಿ ಅವರು ಕುಮಟಳ್ಳಿ ವಿಚಾರದಲ್ಲಿ ಭಾವನಾತ್ಮಕವಾಗಿ‌ ಮಾತನಾಡಿದ್ದಾರೆ. ಅದು ಕೇವಲ ಪಾಸಿಂಗ್ ರಿಮಾರ್ಕ್. ಅದನ್ನು ತೀರ ಗಂಭೀರವಾಗಿ ಪರಿಗಣಿಸೋದು ಬೇಡ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

Advertisement

ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ನಮ್ಮ ಮನೆಯಲ್ಲಿ ಯಾವ ಶಾಸಕರು ಪ್ರತ್ಯೇಕ ಸಭೆ ನಡೆಸಿಲ್ಲ, ಎಲ್ಲವೂ ವದಂತಿ ಎಂದು ಸ್ಪಷ್ಟನೆ ನೀಡಿದರು.

ದೇಶ ದ್ರೋಹದ ಘೋಷಣೆ ವಿಚಾರ ಕುರಿತು ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಇಲ್ಲಿಯೇ ಅನ್ನ ತಿಂದು ಇಲ್ಲಿಯೆ ಈ ದೇಶ ದ್ರೋಹದ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಇದು ಕ್ಷಮಿಸುವ ಅಪರಾಧವಲ್ಲ. ತನಿಖೆ ಪ್ರಗತಿಯಲ್ಲಿದೆ, ರಾಜ್ಯ ಸರ್ಕಾರ ಎಲ್ಲಾ‌ ಕ್ರಮ ಕೈಗೊಂಡಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next