Advertisement

ನೂತನ ಕೇಂದ್ರ ಸಚಿವರಿಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಭಿನಂದನೆ

08:15 PM Jul 07, 2021 | Team Udayavani |

ಬೆಂಗಳೂರು : ಕೇಂದ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ನಾಲ್ವರು ಸಂಸದರಿಗೆ ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಭಿನಂದನೆ ಸಲ್ಲಿಸಿದರು.

Advertisement

ಸಂಸದರಾದ ಶೋಭ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ ಖೂಬಾ ಮತ್ತು ರಾಜೀವ್ ಚಂದ್ರಶೇಖರ್ ಅವರನ್ನು ತಮ್ಮ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಜನತೆಗೆ ಸೂಕ್ತ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್ ತಿಳಿಸಿದ್ದಾರೆ.

ಈ ನಾಲ್ವರು ನೂತನ ಸಚಿವರಿಗೆ ದೂರವಾಣಿ ಕರೆಯ ಮೂಲಕ ಸಚಿವ ಜಗದೀಶ್‌ ಶೆಟ್ಟರ್ ಅಭಿನಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next