Advertisement

ಜಗದೀಶ ಶೆಟ್ಟರ್ ಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ: CM Bommai

12:04 PM Apr 15, 2023 | Team Udayavani |

ಹುಬ್ಬಳ್ಳಿ: ನಾವು ರಾಜಕಾರಣಕ್ಕೆ ಬರುವುದಕ್ಕಿಂತ ಶೆಟ್ಟರ್ ಹಾಗೂ ನಾನು ಸ್ನೇಹಿತರು. ಅವರಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ. ಅವರ ಬೆಂಬಲಿಗರ ಮಾತಿನಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ನಿತ್ಯವೂ ವರಿಷ್ಠರೊಂದಿಗೆ ಸಂಪರ್ಕದಲ್ಲಿದ್ದೇವೆ. ಆದರೆ ತಪ್ಪಿಸಲು ಕೆಲಸ ಮಾಡುತ್ತಿದ್ದಾರೆ ಎನ್ನುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಜಗದೀಶ ಶೆಟ್ಟರ್ ಬಿಜೆಪಿಯ ನಿಷ್ಠಾವಂತ ನಾಯಕರಾಗಿದ್ದು, ಅವರದ್ದು ಜನಸಂಘ ಕಾಲದ ಮನೆತನ.‌ ಉತ್ತರ ಕರ್ನಾಟಕ ಭಾಗಕ್ಕೆ ಅವರು ಅಗತ್ಯವಾಗಿದ್ದು, ಸಕ್ರಿಯ ರಾಜಕಾರಣದಲ್ಲಿ ಉಳಿಸಿಕೊಳ್ಳಬೇಕೆಂದು ವರಿಷ್ಠರೊಂದಿಗೆ ಮಾತನಾಡುತ್ತಿದ್ದೇವೆ ಎಂದರು.

ನಾನು ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದರೆ ದಾಖಲೆಗಳನ್ನು ಬಿಡುಗಡೆ ಮಾಡಲಿ. ನೀರಾವರಿ ಯೋಜನೆಯಲ್ಲಿ ನಡೆದ ಹಗರಣದಲ್ಲಿ ನೆಹರು ಓಲೇಕಾರ ಅವರಿಗೆ ಶಿಕ್ಷೆ ಆಗಿದೆ. ಅದನ್ನ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next