Advertisement

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

11:57 AM May 31, 2023 | Team Udayavani |

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ. ಅವರ ಅನುಭವ ಹಾಗೂ ಶಕ್ತಿಯನ್ನು ಪಕ್ಷ ಸದ್ಬಳಿಕೆ ಮಾಡಿಕೊಳ್ಳಲಿದೆ. ಅವರೊಂದಿಗೆ ಪಕ್ಷ ಇರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಿಳಿಸಿದರು.

Advertisement

ಇಲ್ಲಿನ ಬದಾಮಿ ನಗರದಲ್ಲಿರುವ ಶೆಟ್ಟರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ, ಶ್ರೀನಿವಾಸ, ಲಕ್ಷ್ಮಣ ಸವದಿ ಅವರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ.

ರಾಜಕೀಯದಲ್ಲಿ ಸೋಲು ಗೆಲುವು ಸಾಮಾನ್ಯ. ಶೆಟ್ಟರ ಹಾಗೂ ಸವದಿ ಅವರಿಗೆ ಹೈಕಮಾಂಡ್ ಹಾಗೂ ಎಐಸಿಸಿ ಅಧ್ಯಕ್ಷರ ಸಂದೇಶವನ್ನು ಇವರಿಗೆ ಮುಟ್ಟಿಸಿದ್ದೇನೆ. ಮುಂದಿನ ಲೋಕಸಭೆ ಚುನಾವಣೆ ತಯಾರಿ ಹಾಗೂ ಸಂಘಟನೆ ಕುರಿತು ಮಾತನಾಡಿದ್ದೇವೆ. ಪಕ್ಷ ಶೆಟ್ಟರ ಅವರೊಂದಿಗೆ ಇರುತ್ತದೆ ಎಂದರು.

ಶೆಟ್ಟರ್ ಜೊತೆ ನಾವು ಇರುತ್ತೇವೆ‌. ನಮಗೆ ವರಿಷ್ಠರ ಆದೇಶ ಇದೆ. ಶೆಟ್ಟರ ಅವರಿಗೆ ಸ್ಥಾನಮಾನ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಒಂದೇ ಮಾತಿನಲ್ಲಿ ಹೇಳುತ್ತೇನೆ. ಪಕ್ಷ ಅವರ ಜೊತೆ ಇರುತ್ತದೆ. ಈ ವಿಚಾರದಲ್ಲಿ ನಾವೇನು ಗೌಪ್ಯವಾಗಿ ಇಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next