Advertisement

ಜಗದೀಶ ಶೆಟ್ಟರ್‌ಗೆ ಮಾತೃ ವಿಯೋಗ

09:56 AM Jan 11, 2020 | Lakshmi GovindaRaj |

ಹುಬ್ಬಳ್ಳಿ: ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರ ಮಾತೃಶ್ರೀ ಬಸವಣ್ಣೆಮ್ಮ ಶಿವಪ್ಪ ಶೆಟ್ಟರ (86) ಶುಕ್ರವಾರ ಲಿಂಗೈಕ್ಯರಾಗಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ಕೆರೂರ ಗ್ರಾಮದವರಾದ ಬಸವಣ್ಣೆಮ್ಮ, ಸಚಿವ ಜಗದೀಶ ಶೆಟ್ಟರ್‌, ಉದ್ಯಮಿ ಮೋಹನಶೆಟ್ಟರ್‌, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌ ಹಾಗೂ ಪುತ್ರಿ ವಿಜಯಾ ಹೊಳಚಿ ಸೇರಿ ಸೊಸೆಯಂದಿರು, ಅಳಿಯ, ಮೊಮ್ಮಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Advertisement

ಇಲ್ಲಿನ ಕೇಶ್ವಾಪುರ ಶಾಂತಿನಗರ ಲಕ್ಷ್ಮೀ ಎಸ್ಟೇಟ್‌ನಲ್ಲಿ ಕಿರಿಯ ಪುತ್ರ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ ನಿವಾಸದಲ್ಲಿದ್ದ ಇವರು ಕೆಲ ದಿನಗಳಿಂದ ಅನಾರೋಗ್ಯಕ್ಕೊಳಗಾಗಿದ್ದರು. ಶುಕ್ರವಾರ ಮಧ್ಯಾಹ್ನ 1.40ರ ಸುಮಾರಿಗೆ ಹೃದಯಾಘಾತದಿಂದ ಮೃತಪಟ್ಟರು. ಜ.11ರ ಬೆಳಗ್ಗೆ 11ಕ್ಕೆ ಮಂಟೂರ ರಸ್ತೆ ಕಲಬುರ್ಗಿ ಮಠದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬಸವಣ್ಣೆಮ್ಮ ಶೆಟ್ಟರ ನಿಧನಕ್ಕೆ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ, ಶಾಸಕ ಪ್ರಸಾದ ಅಬ್ಬಯ್ಯ, ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ ಸೇರಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next