Advertisement

ಜಗಜ್ಯೋತಿ ಕಲಾವೃಂದದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

02:31 PM Sep 15, 2017 | Team Udayavani |

ಡೊಂಬಿವಲಿ: ಜಗಜ್ಯೋತಿ ಕಲಾವೃಂದ ಡೊಂಬಿವಲಿ ವತಿಯಿಂದ ಸೆ. 10 ರಂದು ಬೆಳಗ್ಗೆ ಡೊಂಬಿವಲಿ ಪೂರ್ವದ ಠಾಕೂರ್‌ ಸಭಾಗೃಹದಲ್ಲಿ ಆಯೋಜಿಸಲಾಗಿದ್ದ ಯಕ್ಷಗಾನ ತಾಳಮದ್ದಳೆ ಮತ್ತು ಸಮ್ಮಾನ ಸಮಾರಂಭದಲ್ಲಿ ಆರ್ಥಿಕವಾಗಿ ಹಿಂದುಳಿದ ತುಳು-ಕನ್ನಡಿಗ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನಿತ್ತು ಗೌರವಿಸಲಾಯಿತು.

Advertisement

ಸಮಾರಂಭದ ವೇದಿಕೆಯಲ್ಲಿ ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ,  ಬಿಲ್ಲವರ ಅಸೋಸಿಯೇಶನ್‌ ಸಂಚಾಲಿತ ಗುರುನಾರಾಯಣ ಯಕ್ಷಗಾನ ಮಂಡಳಿ ಸಾಂತಾಕ್ರೂಜ್‌ ಇದರ ಹಿರಿಯ ಕಲಾವಿದ ರಾಮಚಂದ್ರ ಸಾಲ್ಯಾನ್‌, ಉದ್ಯಮಿ ಗಣೇಶ್‌ ಶೆಟ್ಟಿ ಐಕಳ. ಶೇಖರ ಶೆಟ್ಟಿ, ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರಾಜೀವ ಭಂಡಾರಿ, ಪ್ರಭಾಕರ ಶೆಟ್ಟಿ, ಅಶೋಕ್‌ ಡಿ. ಶೆಟ್ಟಿ, ಜಗನ್ನಾಥ ಕಾಂಚನ್‌, ಸನತ್‌ ಕುಮಾರ್‌ ಜೈನ್‌, ರವಿ ಸನಿಲ್‌ ಹಾಗೂ ಜಗಜ್ಯೋತಿ ಕಲಾವೃಂದದ ಪದಾಧಿಕಾರಿಗಳಾದ ಅಧ್ಯಕ್ಷ ವಸಂತ ಸುವರ್ಣ, ಉಪಾಧ್ಯಕ್ಷ ರಮೇಶ್‌ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಂತೋಷ್‌ ಶೆಟ್ಟಿ, ಕೋಶಾಧಿಕಾರಿ ಚಂದ್ರ ನಾಯಕ್‌, ಸದಸ್ಯರಾದ ಬಾಬು ಮೊಗವೀರ, ರಾಜು ಸುವರ್ಣ, ತಾರನಾಥ ಅಮೀನ್‌, ಸದಾಶಿವ ಶ್ರೀಯಾನ್‌, ಸುಕುಮಾರ್‌ ಎನ್‌. ಶೆಟ್ಟಿ, ಸುರೇಂದ್ರ ನಾಯ್ಕ ಉಪಸ್ಥಿತರಿದ್ದರು. ವಸಂತ ಸುವರ್ಣ ಸ್ವಾಗತಿಸಿದರು. ಸುಕುಮಾರಿ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸನತ್‌ಕುಮಾರ್‌ ಜೈನ್‌ ಅತಿಥಿಗಳನ್ನು ಪರಿಚಯಿಸಿದರು. ಸಂತೋಷ್‌ ಶೆಟ್ಟಿ ವಂದಿಸಿದರು. 

ಚಿತ್ರ-ವರದಿ: ಗುರುರಾಜ ಪೋತನೀಸ.

Advertisement

Udayavani is now on Telegram. Click here to join our channel and stay updated with the latest news.

Next