Advertisement

ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ

06:09 PM May 23, 2020 | Naveen |

ಜಗಳೂರು: ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮ ಅನುಸರಿಸಿ ಕೋವಿಡ್  ತಡೆಗಟ್ಟಲು ಸಹಕರಿಸಬೇಕು ಎಂದು ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ ಹೇಳಿದರು.

Advertisement

ಶುಕ್ರವಾರ ಪಟ್ಟಣದ ತಾಲೂಕು ಕಚೇರಿ ಮುಖ್ಯದ್ವಾರದಲ್ಲಿ ಥರ್ಮಲ್‌ ಸ್ಕ್ರೀನಿಂಗ್ ‌ ಪರಿಶೀಲಿಸಿ ಅವರು ಮಾತನಾಡಿದರು. ಕೋವಿಡ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಪ್ರತಿಯೊಬ್ಬರ ಸಹಕಾರ ಮಖ್ಯ. ಎಲ್ಲರೂ ಮಾಸ್ಕ್ ಧರಿಸಬೇಕು ಮತ್ತು ಸ್ಯಾನಿಟೈಸರ್‌ ಬಳಕೆ ಮಾಡಿಕೊಳ್ಳಬೇಕು. ಕೆಲಸ ಕಾರ್ಯಗಳಿಗೆ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರಿಗೆ ತಪಸಾಣೆ ಮಾಡಿ ಸ್ಯಾನಿಟೈಸರ್‌ ಸಿಂಪಡಿಸಿ ಮಾಸ್ಕ್ ವಿತರಿಸಲಾಗುತ್ತದೆ ಎಂದರು. ಆರ್‌ಐ ಕುಬೇಂದ್ರ ನಾಯ್ಕ, ವಿಎ ಮಲ್ಲಿಕಾರ್ಜುನ, ವಿನಾಯಕ, ಪಾಟೀಲ್‌, ಸಿಬ್ಬಂದಿ ನಿಜಗುಣ ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next