Advertisement

ಸಮರ್ಪಕ ದಾಖಲೆ ನೀಡದ್ದಕ್ಕೆ ದಾಳಿ

05:36 PM Apr 24, 2020 | Naveen |

ಜಗಳೂರು: ಹೆಚ್ಚಿನ ಮದ್ಯ ಮಾರಾಟವಾಗಿದ್ದರೂ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ ಎಂಬ ಖಚಿತ ಮಾಹಿತಿ ಆಧರಿಸಿ ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ ನೇತೃತ್ವದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ತಂಡ ಪಟ್ಟಣದ ಹೊಸ ಬಸ್‌ ನಿಲ್ದಾಣದ ಸಮೀಪ ಇರುವ ವೆಂಕಟೇಶ್ವರ್‌ ಬಾರ್‌ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿತು.

Advertisement

ಲಾಕ್‌ ಡೌನ್‌ ಆಗುವ ಮುನ್ನ ಎರಡು ದಿನಗಳಿಂದ ಸುಮಾರು 1500ಕ್ಕೂ ಹೆಚ್ಚು ಲೀಟರ್‌ ಮದ್ಯವನ್ನು ಮಾರಾಟ ಮಾಡಲಾಗಿದೆ ಮತ್ತು ಇನ್‌ವೈಸ್‌ ಹಾಗೂ ಬಿಲ್‌, ಡೈಲಿ ಸ್ಟಾಕ್‌ನ ಮಾಹಿತಿಯನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದರ ಸಂಪೂರ್ಣ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದು ವರದಿ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next