Advertisement

ಜಗನ್ ರೆಡ್ಡಿ ಸೈಕೋ ರೀತಿಯಲ್ಲಿ ವರ್ತಿಸುತ್ತಿದ್ದಾರೆ: ಚಂದ್ರಬಾಬು ನಾಯ್ಡು

09:38 AM Oct 13, 2019 | Mithun PG |

ವಿಶಾಖಪಟ್ಟಣಂ: ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಹೊಸ ಸರ್ಕಾರ ಜನ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

Advertisement

ವೈಎಸ್ ಆರ್ ಸಿಪಿ ಸರ್ಕಾರ ಜನ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದ್ದು, ಇತರ ಪಕ್ಷಗಳ ನಾಯಕರ ಮೇಲೆ ಸುಖಾಸುಮ್ಮನೆ ಕೇಸ್ ಹಾಕಲಾಗುತ್ತಿದೆ. ಅದರ ಜೊತೆಗೆ ಪೊಲೀಸರು ಕೂಡ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಒಳ್ಳೆಯ ಜನರಿಗೆ ನಾನು ಕೂಡ ಒಳ್ಳೆಯದನ್ನೇ ಬಯಸುತ್ತೇನೆ. ಆದರೇ ಜಗನ್ ರೆಡ್ಡಿ ಸೈಕೋ ಮಾದರಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ವೈಎಸ್ ಆರ್ ಸಿಪಿ ಸರ್ಕಾರದ ನೀತಿಗಳು ಜನವಿರೋಧಿಯಾಗಿದ್ದು, ಪಕ್ಷದ ಮುಖಂಡರು  ಜಗನ್ ಟ್ಯಾಕ್ಸ್ ಅನ್ನು ವಸೂಲಿ ಮಾಡುತ್ತಿದ್ದಾರೆ. ನಾನು ಹಲವು ಮುಖ್ಯಮಂತ್ರಿಗಳನ್ನು ನೋಡಿದ್ದು ಆದರೇ ಜಗನ್ ರೆಡ್ಡಿ ಮಾದರಿ ದ್ವೇಷ ಕಾರುವ ಸಿಎಂ ಗಳನ್ನು ನೋಡಿಲ್ಲ. ಕಾನೂನು ಎಲ್ಲರಿಗೂ ಒಂದೇ . ಸರ್ಕಾರ ಕೂಡಲೇ ತನ್ನ ನೀತಿಯನ್ನು ಬದಲಾಯಿಸಿಕೊಳ್ಳಬೆಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಗನ್ ರೆಡ್ಡಿ ಅಧಿಕಾರಕ್ಕೆ ಬಂದಾಗಿನಿಂದ 8 ಮಂದಿ ಟಿಡಿಪಿ ಕಾರ್ಯಕರ್ತರ ಹತ್ಯೆಯಾಗಿದೆ.  500 ಮಂದಿಯ ಮೇಲೆ ಹಲ್ಲೆಯಾಗಿದೆ.  ನನ್ನನ್ನೂ ಸೇರಿ ಹಲವು ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.  ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವವರನ್ನು ವಿನಾಕಾರಣ ಬಂಧಿಸಲಾಗಿದೆ. ಪ್ರಜಾಪ್ರಭುತ್ತವದ ಕಗ್ಗೊಲೆಯಾಗುತ್ತಿದೆ ಎಂದು  ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next