Advertisement

ಇಂದು ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್‌ ಧನ್ಕರ್‌ ಪ್ರಮಾಣ ವಚನ

09:03 PM Aug 10, 2022 | Team Udayavani |

ನವದೆಹಲಿ: ದೇಶದ 14ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಜಗದೀಪ್‌ ಧನ್ಕರ್‌ರವರು ಗುರುವಾರದಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Advertisement

ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.

ಇದೇ ವೇಳೆ, ಅವರು ರಾಜ್ಯಸಭೆಯ ಸ್ಪೀಕರ್‌ ಆಗಿಯೂ ನೇಮಕಗೊಳ್ಳಲಿದ್ದಾರೆ. ಇತ್ತೀಚೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅವರು ತಮ್ಮ ಎದುರಾಳಿ ಮಾರ್ಗರೇಟ್‌ ಆಳ್ವಾರವರ ವಿರುದ್ಧ ಗೆಲುವು ಪಡೆದಿದ್ದರು.

ಆ. 7ರಂದು ಅವರಿಗೆ ಭಾರತೀಯ ಚುನಾವಣಾ ಆಯೋಗವು ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಗ್ಗೆ ಪ್ರಮಾಣಪತ್ರ ಹಸ್ತಾಂತರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next