Advertisement

ಆಕ್ಸಿಜನ್ ಪೂರೈಕೆ ಸಂಬಂಧ ಅಧಿಕಾರಿಗಳ ತುರ್ತು ಸಭೆ ಕರೆದ ಜಗದೀಶ್ ಶೆಟ್ಟರ್

01:15 PM May 05, 2021 | Team Udayavani |

ಬೆಂಗಳೂರು : ಆಕ್ಸಿಜನ್ ಪೂರೈಕೆ ಸಂಬಂಧ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಅಧಿಕಾರಿಗಳ ಜೊತೆ ತುರ್ತು ಸಭೆಯನ್ನು ಕರೆದಿದ್ದಾರೆ. ಈ ವೇಳೆ ರಾಜ್ಯದಲ್ಲಿ ಆಕ್ಸಿಜನ್ ಪೂರೈಕೆ ಮತ್ತು ಸರಬರಾಜು ಕುರಿತಂತೆ ಉನ್ನತ ಮಟ್ಟದ ಮಾತುಕತೆ ನಡೆಯಲಿದೆ.

Advertisement

ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ರಾಜ್ ಕುಮಾರ್ ಖತ್ರಿ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣಾ, ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇನ್ನು ಕೇಂದ್ರ ಹಾಗೂ ಕೈಗಾರಿಕೆಗಳ ಜೊತೆ ಸಮನ್ವಯ ಕಾಪಾಡಿಕೊಳ್ಳುವ ಜವಾಬ್ದಾರಿ ಹೊತ್ತಿರೋ ಶೆಟ್ಟರ್, ಕೈಗಾರಿಕೆಗಳಿಂದ ಆಕ್ಸಿಜನ್ ಪಡೆಯೋ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಅಲ್ಲದೆ ಆಕ್ಸಿಜನ್ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next