Advertisement

55ನೇ ಹುಟ್ಟುಹಬ್ಬ ಆಚರಿಸಿಕೊಂಡ “ನವರಸ ನಾಯಕ’

04:25 PM Mar 17, 2018 | Team Udayavani |

ನವರಸ ನಾಯಕ, ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಜಗ್ಗೇಶ್ ಇಂದು ತಮ್ಮ 55ನೇ ಹುಟ್ಟುಹಬ್ಬವನ್ನು ಪತ್ನಿಯೊಂದಿಗೆ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಆಚರಿಸಿಕೊಂಡಿದ್ದಾರೆ.

Advertisement

ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಜಗ್ಗೇಶ್ ನಾಡು, ನುಡಿ, ಭಾಷೆ, ರಾಜಕೀಯ, ವಿಚಾರಗಳಿಗೆ ಸಂಬಂಧಪಟ್ಟಂತೆ ಟ್ಟೀಟರ್’ನಲ್ಲಿ ತೊಡಗಿರುತ್ತಾರೆ. ಅಲ್ಲದೇ ಇಂದು ಜಗ್ಗೇಶ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಹಿಂದೆ ತಿಳಿದೋ, ತಿಳಿಯದೆಯೋ ಮಾಡಿದ ತಪ್ಪಿಗೆ ಅಭಿಮಾನಿಗಳ ಕ್ಷಮೆ ಕೋರಿ ತಮ್ಮ ಮನದಾಳವನ್ನ ತೋಡಿಕೊಂಡಿದ್ದಾರೆ.

ಇನ್ನು ಮುಖ್ಯವಾಗಿ ಜಗ್ಗೇಶ್ ಶ್ರೀ ಗುರು ರಾಘವೇಂದ್ರ ಸ್ವಾಮಿ ಭಕ್ತಾರಾಗಿದ್ದು, ಪ್ರತಿ ಬಾರಿ ಜಗ್ಗೇಶ್​ ಪತ್ನಿ ಸಮೇತರಾಗಿ ಮಂತ್ರಾಲಯಕ್ಕೆ ಹೋಗುತ್ತಿದ್ದರು. ಆದರೆ ಈ ಬಾರಿ ಕೊಲ್ಲೂರಿಗೆ ಹೋಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವುದು ವಿಶೇಷ.
 

“ನನ್ನ ಜನ್ಮಕೊಟ್ಟ ನನ್ನ ದೇವರಿಗೆ ಶರಣು ಶರಣಾರ್ಥಿ. ತಿಳಿದೋ ತಿಳಿಯದೆಯೋ ನಾನು ಮಾಡಿದ ಸರ್ವ ಅಪರಾಧ ಕ್ಷಮಿಸಿ ಹರಸಿ. ಸಾಧ್ಯವಾದಷ್ಟು ನಿಮ್ಮ ಗೌರವ ಉಳಿಸಿದ ಮಗನಾಗಿ, ಗಂಡನಾಗಿ, ತಂದೆಯಾಗಿ, ತಾತನಾಗಿ ಸಮಾಜಕ್ಕೆ ತಲೆಬಾಗಿ ಗೌರವದಿಂದ ಬಾಳಿಬದುಕಿ ಅಸ್ತಮದ ಕಡೆಗೆ ನಡೆದಿದೆ ನಿಮ್ಮ ಮಗನ ಬದುಕು. ಇಂದಿಗೆ ನಾನು ಮಾಗುತ್ತಿರುವ 55ರ ಮನುಜ. ಹರಸಿದ ಆತ್ಮಗಳಿಗೆ ಶರಣು’. –ಜಗ್ಗೇಶ್

Advertisement
Advertisement

Udayavani is now on Telegram. Click here to join our channel and stay updated with the latest news.

Next