Advertisement

ವೆಂಕಯ್ಯ ನಾಯ್ಡು ಆಯ್ಕೆ ವಿರೋಧಕ್ಕೆ ಜಗ್ಗೇಶ್‌ ಟ್ವೀಟ್‌

08:00 AM Aug 07, 2017 | Team Udayavani |

ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡಿದ್ದರೆ, ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗುತ್ತಿತ್ತು ಎಂದು ನಟ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯ ಜಗ್ಗೇಶ್‌ ಟ್ವೀಟ್‌ ಮಾಡಿದ್ದಾರೆ. “ಕರ್ನಾಟಕದಲ್ಲಿ ಅವರನ್ನು ಭಾಷಾ ಭಾವನೆಯಲ್ಲಿ ರಾಜ್ಯಸಭೆಗೆ ಆಯ್ಕೆ ಮಾಡಲು ಆಕ್ಷೇಪಿಸಿದರು. ಆದರೆ, ಇಂದು ಭಾರತಕ್ಕೆ ಉಪರಾಷ್ಟ್ರಪತಿ.ಬಾರದು ಬಪ್ಪದು … ಬಪ್ಪದು ತಪ್ಪದು! ಇದು ದೇವರ ಲೀಲೆ’ ಎಂದು ಜಗ್ಗೇಶ್‌ ಟ್ವೀಟ್‌ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಅದನ್ನು ಟ್ವಿಟರ್‌ ವಾಲ್‌ನಿಂದ ತೆಗೆದುಹಾಕಿದ್ದಾರೆ. ಇದಕ್ಕೂ ಮುನ್ನ, “ವೆಂಕಯ್ಯ ನಾಯ್ಡು ಅವರು ಕರ್ನಾಟಕದಿಂದ ರಾಜ್ಯಸಭೆಗೆ ಮೂರು ಬಾರಿ ಆಯ್ಕೆಯಾಗಿದ್ದರು. 

Advertisement

ಆದರೆ, ಕಳೆದ ವರ್ಷ ಚುನಾವಣೆ ನಡೆದ ಸಂದರ್ಭದಲ್ಲಿ ಕರ್ನಾಟದಿಂದ ವೆಂಕಯ್ಯ ನಾಯ್ಡು ಅವರು ಸ್ಪರ್ಧಿಸುವುದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆದರೆ, ಅವರು ರಾಜ್ಯದಿಂದ ಆಯ್ಕೆಯಾಗಿದ್ದರೆ,ಇಂದು ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗಿರುತ್ತಿತ್ತು ಎಂಬರ್ಥದಲ್ಲಿ ಜಗ್ಗೇಶ್‌ ಟ್ವೀಟ್‌ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next