Advertisement

ಕಾಲೇಜಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ …ಪೋಷಕರಿಗೆ ಕಿವಿಮಾತು ಹೇಳಿದ ನಟ ಜಗ್ಗೇಶ್

05:14 PM Mar 01, 2021 | Team Udayavani |

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಇಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ (ಮಾರ್ಚ್ 1) ಪ್ರಕರಣಕ್ಕೆ ಸಂತಾಪ ಸೂಚಿಸಿರುವ ಹಿರಿಯ ನಟ ನವರಸ ನಾಯಕ ಜಗ್ಗೇಶ್, ಮಕ್ಕಳ ದುರ್ಬಲ ಮನಸ್ಸಿಗೆ ಮರುಕ ಪಟ್ಟಿದ್ದಾರೆ.

Advertisement

ಬೆಂಗಳೂರು ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಬಿಇ ಮೂರನೇ ಸೆಮಿಸ್ಟರ್​ ಓದುತ್ತಿದ್ದ ಜಯಂತ್ ರೆಡ್ಡಿ, ಇಂದು ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಜಯಂತ್ ರೆಡ್ಡಿ ಆತ್ಮಹತ್ಯೆ ನಿಲುವು ಕಂಡು ದುಖಃವಾಯಿತು ಎಂದಿರುವ ಜಗ್ಗೇಶ್, ನೀ ಒಬ್ಬನೆ ಸಾಯಲಿಲ್ಲಾ ಕಂದ ತಂದೆ-ತಾಯಿ ಬಂಧುಮಿತ್ರರ ಕೊಂದು ಬಿಟ್ಟೆ. ಈಸಬೇಕು ಇದ್ದು ಜಯಿಸಬೇಕು. ಇಂದಿನ ಪೋಷಕರು ತಮ್ಮ ಮಕ್ಕಳಿಗೆ ಬಾಹ್ಯ ವಿದ್ಯೆಗಿಂತ ಸ್ಥಿತಪ್ರಜ್ಞತೆ ಹಾಗೂ ಆಂತರ್ಯ ಗಟ್ಟಿಯಾಗುವ ವಿದ್ಯೆ ಕಲಿಸಬೇಕು. ಮಕ್ಕಳಿಗೆ ಆಸ್ತಿ ಮಾಡದೆ, ಮಕ್ಕಳನ್ನೆ ಆಸ್ತಿ ಮಾಡಿ ಎಂದು ಪಾಲಕರಿಗೆ ಕಿವಿ ಮಾತು ಹೇಳಿದ್ದಾರೆ.

ಇನ್ನು ಜಯಂತ್ ಇಂದು ಪರೀಕ್ಷೆ ಬರೆಯಲು ಬಂದಿದ್ದ. ಆದರೆ, ಕಾಲೇಜಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ವಿವಿ ಪುರಂ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿಯ ಶವವನ್ನು ಕಿಮ್ಸ್​ ಆಸ್ಪತ್ರೆಗೆ ಸಾಗಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next