Advertisement

ಕಾರು ಅಪಘಾತಕ್ಕೆ ಕಾರಣ ಏನು? ಪ್ರಾಣಾಪಾಯದಿಂದ ಪುತ್ರ ಪಾರಾಗಿದ್ದು ಹೇಗೆ ಎಂದು ಹೇಳಿದ ಜಗ್ಗೇಶ್

03:10 PM Jul 01, 2021 | Team Udayavani |

ಬೆಂಗಳೂರು :  ತಮ್ಮ ಪುತ್ರ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಕಾರಣ ಏನು ಹಾಗೂ ಅವನು ಪ್ರಾಣಾಪಾಯದಿಂದ ಪಾರಾಗಿರುವುದು ಹೇಗೆ ಎಂಬುದನ್ನು ಚಂದನವನದ ಹಿರಿಯ ನಟ ಜಗ್ಗೇಶ್ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟಿ ಮಾಡಿರುವ ನವರಸ ನಾಯಕ ಜಗ್ಗೇಶ್, ‘ಕೊರೋನ ಬಂದಾಗಿನಿಂದ ಹೊರ ಹೋಗಿಲ್ಲಾ ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಹೊರ ಹೋದ ಮಗ ಯತಿರಾಜ,ಅವನು ಪ್ರತಿಬಾರಿ ಅವನ ಇಷ್ಟದ ರಸ್ತೆ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆಬಿದ್ದಿದೆ!ರಾಯರದಯೇ ಹಾಗು ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವು ಇಲ್ಲ!” ಎಂದಿದ್ದಾರೆ ಜಗ್ಗೇಶ್.

ಜಗ್ಗೇಶ್ ನೀಡಿರುವ ಮಾಹಿತಿಯಂತೆ ಕಾರಿಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಸ್ಟೀರಿಂಗ್ ವ್ಹೀಲ್ ತಿರುಗಿಸಿದ ಪರಿಣಾಮ ಕಾರು ರಸ್ತೆ ವಿಭಜಗಕ್ಕೆ ಢಿಕ್ಕಿಯಾಗಿದೆ. ಯತಿರಾಜ್‌ಗೆ ಯಾವುದೇ ಗಾಯಗಳಾಗಿಲ್ಲ ಎಂದು ಸಹ ಜಗ್ಗೇಶ್ ಸ್ಪಷ್ಟನೆ ನೀಡಿದ್ದಾರೆ.

ಇನ್ನು ದುರ್ಘಟನೆಯಲ್ಲಿ ಯತಿರಾಜ್ ನಿಗೆ ಏನೂ ಆಗದಿವರುವುದಕ್ಕೆ ರಾಯರ ಆಶೀರ್ವಾದ ಕಾರಣ ಎಂದು ಹೇಳಿಕೊಂಡಿದ್ದಾರೆ ಜಗ್ಗೇಶ್. ‘ ರಾಯರು ನನ್ನಜೊತೆ ಸದಾ ಇರುತ್ತಾರೆ(ಇದ್ದಾರೆ).ಇಂಥ ಘಟನೆಗಳು ಚಮತ್ಕಾರ ನನ್ನ ಬದುಕಲ್ಲಿ ನಡೆಯುವುದೆ ನಾನಿದ್ದೀನೋ ಇರುತ್ತೀನೋ ನಿನ್ನ ಜೊತೆ ಯಾವಾಗಲು ಎಂದು ರಾಯರು ಅವರ ಪವಾಡ ನಿರೂಪಿಸಲು!ನೆನ್ನೆ ಪೂಜೆಯಲ್ಲಿ ಕುಟುಂಬದ ರಕ್ಷಣೆಗೆ ಪ್ರಾರ್ಥಿಸಿದ್ದೆ! ಸದಾ ಅವರ ಸ್ಮರಣೆಯಲ್ಲೆ ಬದುಕುವ ನನಗೆ ಇದು ಮತ್ತೊಂದು ಪವಾಡ!ನಂಬಿ ಕೆಟ್ಟವರಿಲ್ಲಾ ಗುರುರಾಯರ! ಎಂದು ರಾಯರನ್ನು ನೆನೆದು ಟ್ವೀಟ್ ಮಾಡಿದ್ದಾರೆ ಜಗ್ಗೇಶ್.

Advertisement

Advertisement

Udayavani is now on Telegram. Click here to join our channel and stay updated with the latest news.

Next