Advertisement

ಕಾಯ್ದೆ ತಿದ್ದುಪಡಿ ವಿರುದ್ಧ ಜೈಲ್‌ಭರೋ ಚಳವಳಿ

05:27 AM Jun 20, 2020 | Lakshmi GovindaRaj |

ಮೈಸೂರು: ರಾಜ್ಯ ಸರ್ಕಾರ ಅತೃಪ್ತ ಶಾಸಕರಿಗೆ, ಆಪರೇಷನ್‌ ಕಮಲದ ಬಂಡ ವಾಳ ಹೂಡಿಕೆದಾರರಿಗೆ ಅನುಕೂಲ ಕಲ್ಪಿ ಸುವ ಸಲುವಾಗಿ ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಯ ತಿದ್ದುಪಡಿಗೆ ಮುಂದಾಗಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷ ರಾಜ್ಯಾದ್ಯಂತ ಜೈಲ್‌ಭರೋ ಚಳವಳಿ ನಡೆಸಲಿದೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ. ವಿಜಯ್‌ಕುಮಾರ್‌ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸಿಎಲ್‌ಪಿ ಸಭೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ  ಕುಮಾರ್‌ ಈ ಸಂಬಂಧ ತೀರ್ಮಾಸಿದ್ದು, ಪಕ್ಷದಿಂದ ಅಧೀಕೃತ ಆದೇಶ ಬಂದ ತಕ್ಷಣ ರಾಜ್ಯದ ಉದ್ದಗಲಕ್ಕೂ ಬ್ಲಾಕ್‌ ಮಟ್ಟದಿಂದ ಚಳವಳಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ  ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ 1974ರಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಲಕ್ಷಾಂತರ ಜನರಿಗೆ ಭೂಮಿಯ ಹಕ್ಕನ್ನು ದೊರಕಿಸಿಕೊಟ್ಟರು.

ಆದರೀಗ  ಬಿಜೆಪಿಯ ಆಂತರಿಕ ಭಿನ್ನಮತ ಶಮನ ಮಾಡಲು ಕಾಯ್ದೆಯನ್ನೇ ಬಲಿ ಕೊಡಲು ಮುಂದಾಗಿದೆ. ಬಿಜೆಪಿ ರೈತರಿಗೆ ಅನ್ಯಾಯ ಮಾಡುತ್ತಿದೆ. ರಾಜ್ಯ ಸರ್ಕಾರ ಕೂಡಲೇ ಈ ಕಾಯ್ದೆ ತಿದ್ದುಪಡಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.  ಗೋಷ್ಠಿಯಲ್ಲಿ ನಗರಾಧ್ಯಕ್ಷ ಆರ್‌.ಮೂರ್ತಿ, ಪಕ್ಷದ ಮುಖಂಡ ಚಂದ್ರಶೇಖರ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next