Advertisement
ನಗರದಲ್ಲಿ ಗುರುವಾರ ನಡೆದ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಕಪ್ಪು ಹಣ ತಂದು ಪ್ರತಿ ರೈತನ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಣ ಜಮೆ ಮಾಡುತ್ತೇನೆ. ವಿದ್ಯುತ್ ಸಮಸ್ಯೆ ನಿವಾರಿಸಿ ಕೃಷಿ ವಲಯಕ್ಕೆ ಆದ್ಯತೆ ನೀಡುತ್ತೇನೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಅನೇಕಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಕೇಂದ್ರ ಸರಕಾರ ನುಡಿದಂತೆ ನಡೆಯುತ್ತಿಲ್ಲ ಎಂದು ಆರೋಪಿಸಿದರು.
ಎಂದು ತಿಳಿಸಿದರು. ಸಂಘದ ಜಿಲ್ಲಾ ಪ್ರಮುಖ ಚನ್ನಪ್ಪ ಆನೆಗುಂದಿ ಮಾತನಾಡಿ, ಹೈ.ಕ ಭಾಗದಲ್ಲಿ ಈ ವರ್ಷ ಮಳೆ ಕೈ ಕೊಟ್ಟಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಈ ಭಾಗದ ಸಚಿವರು, ಶಾಸಕರು, ಸಂಸದರಿಗೆ ಈ ವಾಸ್ತವಿಕ ಸತ್ಯ ಅರಿಗೆ ಇದ್ದರೂ ಈ ಬಗ್ಗೆ ಸದನದಲ್ಲಿ ಇವರ್ಯಾರು ಚಕಾರ ಎತ್ತದಿರುವುದು ನಾಚಿಕೆಗೇಡು ಸಂಗತಿ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
Related Articles
ತೊಗರಿಗೆ 6500 ರೂ. , ಬೆಂಬಲ ಬೆಲೆ ಘೋಷಿಸಬೇಕು. ನಿವೇಶನ ರಹಿತರಿಗೆ ಮನೆ ನೀಡಬೇಕು. ಪಶುಪಾಲನೆ, ಹೈನುಗಾರಿಕೆಗೆ ಅಗತ್ಯ ನೆರವು ನೀಡಬೇಕು. ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ, ಭೂರಹಿತರಿಗೆ 5 ಎಕರೆ ಭೂಮಿ ನೀಡಬೇಕು.
Advertisement
ಖಾತ್ರಿ ಯೋಜನೆ ಆರಂಭ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಆಗಸ್ಟ 9ರಂದು ಜೈಲ್ ಬರೋ ಚಳವಳಿ ಹಮ್ಮಿಕೊಳ್ಳಲಾಗಿದೆ. ಕಾರಣ ಪ್ರತಿ ತಾಲೂಕಿನಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಳವಳಿಯಲ್ಲಿಭಾಗವಹಿಸಬೇಕು ಎಂದು ಮನವಿ ಮಾಡಿದರು. ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕರ ಸ್ವಾಗತಿಸಿದರು. ತಾಲೂಕು ಅಧ್ಯಕ್ಷ ಧರ್ಮಣ ದೊರೆ ವಂದಿಸಿದರು.