Advertisement

Jaishankar: ಪಾಕ್‌ ತಲುಪಿದ ಜೈಶಂಕರ್‌: 9 ವರ್ಷ ಬಳಿಕ ಭಾರತದ ವಿದೇಶಾಂಗ ಸಚಿವ ಭೇಟಿ

11:00 PM Oct 15, 2024 | Team Udayavani |

ಇಸ್ಲಾಮಾಬಾದ್‌: ಶಾಂಘೈ ಶೃಂಗಸಭೆಯಲ್ಲಿ ಭಾಗಿ ಯಾಗುವುದಕ್ಕಾಗಿ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಮಂಗಳವಾರ ಪಾಕಿಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದು 9 ವರ್ಷಗಳ ಬಳಿಕ ಪಾಕಿ ಸ್ಥಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರ ಭೇಟಿ ಎನಿಸಿಕೊಂಡಿದೆ.

Advertisement

ರಾವಲ್ಪಿಂಡಿಗೆ ಆಗಮಿಸಿದ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಳಿಕ ಪಾಕಿಸ್ಥಾನ ಪ್ರಧಾನಿ ಶೆಹಬಾಜ್‌ ಶರೀಫ್ ಅವರನ್ನು ಭೇಟಿ ಮಾಡಿದ ಜೈಶಂಕರ್‌, ಅತಿಥಿಗಳಿಗಾಗಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಭಾಗಿಯಾದರು. ಬುಧವಾರ ಶೃಂಗಸಭೆ ನಡೆಯಲಿದ್ದು, ಜೈಶಂಕರ್‌ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಶೃಂಗಸಭೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ ಎಂಬ ಕಾರಣಕ್ಕೆ ಪಾಕಿಸ್ಥಾನ ಸರಕಾರ‌ 10,000 ಸೈನಿಕರನ್ನು ನೇಮಕ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next