Advertisement

ಜೇಟ್ಲಿ ಅನಾರೋಗ್ಯ ಸುದ್ದಿ ಸುಳ್ಳು: ಕೇಂದ್ರ ಸ್ಪಷ್ಟನೆ

01:33 AM May 27, 2019 | sudhir |

ಹೊಸದಿಲ್ಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ ಎಂಬ ಸುದ್ದಿಗಳು ಸುಳ್ಳು ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಜೇಟ್ಲಿಯವರ ಆರೋಗ್ಯದ ಬಗ್ಗೆ ಹರಡುತ್ತಿರುವ ಸುದ್ದಿಗಳು ಆಧಾರರಹಿತವಾಗಿವೆ. ಅಂಥ ವದಂತಿಗಳಿಂದ ಮಾಧ್ಯಮಗಳು ದೂರವಿರಬೇಕು ಎಂದು ಕೇಂದ್ರ ಸರಕಾರದ ಕಾರ್ಯದರ್ಶಿ ಸೀತಾಂಶು ಕರ್‌ ಅವರು ಟ್ವೀಟ್‌ ಮಾಡಿದ್ದಾರೆ. ಅನಾರೋಗ್ಯದಿಂದಾಗಿ ಜೇಟ್ಲಿಯವರು ಮೋದಿಯವರ ಹೊಸ ಸಂಪುಟದಲ್ಲಿ ಕಾರ್ಯ ನಿರ್ವಹಿಸುವುದು ಅನುಮಾನ ಎಂದು ಅವರ ಆಪ್ತ ಮೂಲಗಳು ತಿಳಿಸಿರುವುದಾಗಿ ಕೆಲ ಮಾಧ್ಯಮಗಳು ಶುಕ್ರವಾರ ವರದಿ ಮಾಡಿದ್ದವು. ಈ ಬಗ್ಗೆ ಜೇಟ್ಲಿಯವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next