Advertisement

ಯಶಸ್ವಿ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ: ಮನೆಗೆ ಮರಳಿದ ಜೇತ್ಲಿ

07:23 PM Jun 04, 2018 | udayavani editorial |

ಹೊಸದಿಲ್ಲಿ : ಮೂರು ವಾರಗಳ ಹಿಂದೆ ಯಶಸ್ವಿ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಯ ಬಳಿಕ ಇಂದು ಆಸ್ಪತ್ರೆಯಿಂದ ಮನಗೆ ಮರಳಿರುವ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿ ಅವರು ಹಣಕಾಸು ಸಚಿವಾಲಯದ ಪ್ರಮುಖ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದರು. 

Advertisement

ದೇಶದ ಸ್ಥೂಲ ಆರ್ಥಿಕತೆಯ ಬಗ್ಗೆ ಸಚಿವ ಜೇತ್ಲಿ ಅವರಿಗೆ ಹಣಕಾಸು ಕಾರ್ಯದರ್ಶಿ ಹಸ್‌ಮುಖ್‌ ಆಧಿಯಾ, ಆರ್ಥಿಕ ವ್ಯವಹಾರಗಳ ಕಾರ್ಯದದರ್ಶಿ ಸುಭಾಷ್‌ ಚಂದ್ರ ಗರ್ಗ್‌ , ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್‌ ಮಾಹಿತಿ ನೀಡಿದರು. 

ಜೇತ್ಲಿ ಅವರು ತಮ್ಮ ಮನೆಯಿಂದಲೇ ಇನ್ನೂ ಸ್ವಲ್ಪ ದಿನಗಳ ಕಾಲ ವಿಡಿಯೋ ಕಾನ್ಫರೆನ್ಸಿಂಗ್‌ ಮೂಲಕ ತಮ್ಮ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ. 

Advertisement

Udayavani is now on Telegram. Click here to join our channel and stay updated with the latest news.

Next