Advertisement

3 ವರ್ಷದ ಸಾಧನೆ ಜೇಟ್ಲಿ ಭಾಷಣ ಇಂದು

10:38 AM May 28, 2017 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ
ಕೇಂದ್ರ ಸರ್ಕಾರ ದೇಶಾದ್ಯಂತ ಹಮ್ಮಿಕೊಂಡಿರುವ “ಮೇಕಿಂಗ್‌ ಆಫ್ ಡೆವಲಪ್ಡ್ ಇಂಡಿಯಾ’ (ಮೋದಿ) ಕಾರ್ಯಕ್ರಮಕ್ಕೆ ರಾಜ್ಯದಲ್ಲಿ ಭಾನುವಾರ ಅಧಿಕೃತ ಚಾಲನೆ ಸಿಗಲಿದೆ. ಭಾನುವಾರ ಸಂಜೆ 7 ಗಂಟೆಗೆ ನಗರದ ಜ್ಞಾನಜ್ಯೋತಿ
ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅರುಣ್‌ ಜೇಟ್ಲಿ, “ಸಬ್‌ಕಾ ಸಾಥ್‌-ಸಬ್‌ಕಾ ವಿಕಾಸ್‌’ ಕುರಿತಂತೆ ಭಾಷಣ ಮಾಡುವ ಮೂಲಕ ಎಂಓಡಿಐಗೆ ಚಾಲನೆ ನೀಡಲಿದ್ದಾರೆ. ಬಿಜೆಪಿ ಬೆಂಗಳೂರು ಮಹಾನಗರ ಮತ್ತು ನಗರ ಜಿಲ್ಲೆ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ
ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ಕೇಂದ್ರ ಸಚಿವರಾದ
ಅನಂತಕುಮಾರ್‌, ಡಿ.ವಿ.ಸದಾನಂದಗೌಡ, ಸಂಸದ ಪಿ.ಸಿ.ಮೋಹನ್‌, ಆರ್‌.ಅಶೋಕ್‌ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

Advertisement

ಬಿಜೆಪಿ ಯುವ ಸಂಪರ್ಕ ಅಭಿಯಾನ: ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಬೆಂಗಳೂರಲ್ಲಿ ಯುವ ಸಂಪರ್ಕ ಅಭಿಯಾನ ಆಯೋಜಿಸಲಾಗಿದೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ ಈ ಅಭಿಯಾನದಲ್ಲಿ ರಾಜ್ಯದ 36 ಸಂಘಟನಾ ಜಿಲ್ಲೆಗಳಲ್ಲಿರುವ 279 ಮಂಡಲಗಳ ಸಾವಿರ ಯುವ ಮೋರ್ಚಾ ಸದಸ್ಯರು ಪಾಲ್ಗೊಳ್ಳಲಿದ್ದು,
ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರೂ ಆಗಿರುವ ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next