Advertisement

“ಜಲಜೀವನ’ಸಮರ್ಪಕ ಅನುಷ್ಠಾನ

09:52 PM Jul 18, 2021 | Team Udayavani |

ಬಾಗಲಕೋಟೆ: ಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಮನೆಗೂ ಕುಡಿಯುವ ನೀರಿನ ನಲ್ಲಿ ಸಂಪರ್ಕ ನೀಡುವ ಜಲ ಜೀವನ್‌ ಮಿಷನ್‌ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಮುದಾಯ ವಂತಿಗೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಪಂ ಆಡಳಿತಾಧಿಕಾರಿ ಶಿವಯೋಗಿ ಕಳಸದ ತಿಳಿಸಿದರು.

Advertisement

ಜಿಪಂ ಸಿಇಒ ಕಚೇರಿಯಲ್ಲಿಂದು ವಿಡಿಯೋ ಸಂವಾದದ ಮೂಲಕ ಜರುಗಿದ ಜಲಜೀವನ ಮಿಷನ್‌ ಯೋಜನೆಯ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಲ ಜೀವನ ಮಿಷನ್‌ ಸಂಪೂರ್ಣ ಸಮುದಾಯ ಆಧಾರಿತ ಯೋಜನೆಯಾಗಿದ್ದು, ಸ್ಥಳೀಯ ಗ್ರಾಮಸ್ಥರು ಸಕ್ರಿಯವಾಗಿ ಪಾಲ್ಗೊಂಡು ಸಂಪೂರ್ಣ ಸಹಕಾರ ಪಡೆಯುವ ಅಗತ್ಯವಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪ್ರಸ್ತುತ ಮೊದಲನೇ ಹಂತದಲ್ಲಿ 2020-21ನೇ ಸಾಲಿನಲ್ಲಿ ಒಟ್ಟು 337 ಗ್ರಾಮಗಳಿಗೆ ಕಾರ್ಯಾತ್ಮಕ ನಲ್ಲಿ ನೀರನ್ನು ಒದಗಿಸುವ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಅದರಲ್ಲಿ 65 ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. ಇದರಿಂದ ಸುಮಾರು 1.56 ಲಕ್ಷ ಗ್ರಾಮೀಣ ಪ್ರದೇಶದ ಮನೆಗಳಿಗೆ 55 ಲೀಟರ್‌ ಶುದ್ದ ಹಾಗೂ ಸುರಕ್ಷಿತ ನೀರನ್ನು ಒದಗಿಸಲು ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯಲಾಗಿದೆ. ಅದರಂತೆ 2ನೇ ಹಂತದಲ್ಲಿ ಒಟ್ಟು 77 ಗ್ರಾಮಗಳಲ್ಲಿ ಕಾಮಗಾಗಿ ಕೈಗೊಳ್ಳಲಾಗುತ್ತಿದ್ದು, ಅದರಲ್ಲಿ 26 ಸಾವಿರ 2022-23ನೇ ಸಾಲಿನ ಅಂತ್ಯದಲ್ಲಿ ಎಲ್ಲ 414 ಗ್ರಾಮಗಳ ಪ್ರತಿ ಮನೆಗೆ ನಲ್ಲಿ ನೀರು ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದ್ದು, ಅನುಷ್ಠಾನಕ್ಕೆ ಕ್ರಮವಹಿಸಬೇಕು ಎಂದು ಹೇಳಿದರು.

ಯೋಜನೆಯ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲು ವಿನ್‌ ಸೊಸೈಟಿ ಅನುಷ್ಠಾನ ನೆರವು ಸಂಸ್ಥೆಯ ನೇಮಕ ಮಾಡಲಾಗಿದೆ. ಗ್ರಾಮ ಮಟ್ಟದಲ್ಲಿ ಯೋಜನೆಯ ಕುರಿತು ವಿವಿಧ ಆಯ್‌.ಇ.ಸಿ ಹಾಗೂ ಎಚ್‌ಆರ್‌ಡಿ ಚಟುವಟಿಕೆಗಳಾದ ಬೀದಿ ನಾಟಕಗಳು, ಅಧಿಕಾರಿಗಳಿಗೆ ಕಾರ್ಯಾಗಾರ, ಶಾಲೆಗಳಲ್ಲಿ ಕಿರು ಚಿತ್ರಗಳ ಪ್ರದರ್ಶನ, ವಿಶೇಷ ಗ್ರಾಮ ಸಭೆಗಳು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹಾಗೂ ಗ್ರಾಮ ಮಟ್ಟದ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರಿಗೆ ತರಬೇತಿ ನೀಡುವುದು, ತಳ ಹಂತದ ಕಾರ್ಮಿಕರಿಗೆ ಹಾಗೂ ಕಾರ್ಯಕರ್ತರಿಗೆ ತರಬೇತಿ ನೀಡಲು ತಿಳಿಸಿದರು.

ತಾಲೂಕುವಾರು ಜಲ ಜೀವನ್‌ ಮಿಷನ್‌ ಯೋಜನೆ ಅನುಷ್ಠಾನದ ಕುರಿತು ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿ ಕಾರಿಗಳಿಂದ ಮಾಹಿತಿ ಪಡೆದು ಅಧಿಕಾರಿಗಳು ಯೋಜನೆಯಡಿ ಆಯ್ಕೆಯಾದ ಗ್ರಾಮಗಳಿಗೆ ತೆರಳಿ ಕಾಮಗಾರಿ ಪರಿಶೀಲಿಸಬೇಕು. ಯೋಜನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಜವಾಬ್ದಾರಿ ವಹಿಸಿ ಕೆಲಸ ಮಾಡುವ ಮೂಲಕ ಪ್ರತಿ ಮನೆಗೂ ನಲ್ಲಿ ಜೋಡನೆಗೆ ಕ್ರಮವಹಿಸಲು ತಿಳಿಸಿದರು. ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಪುರೋಹಿತ, ಜಗಲಿಮಠ, ಮರೋಳ, ಕಿರಣ ಗೋರ್ಪಡೆ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಉಕ್ಕಲಿ ಮುಂತಾದವರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next