Advertisement

ಜಲಂಚಾರು: ನಾಗ –ತನು –ತರ್ಪಣ ಸೇವೆ ಸಂಪನ್ನ

08:14 PM Apr 30, 2019 | Team Udayavani |

ಕಾಪು: ಕಾಪು ತಾಲೂಕಿನ ಮಜೂರು ಗ್ರಾಮದ ಪಾದೂರಿನ ಜಲಂಚಾರು ಶ್ರೀ ಮಹಾಲಿಂಗೇಶ್ವರ -ಮಹಾಗಣಪತಿ ದೇವಸ್ಥಾನದಲ್ಲಿ ಜರಗುತ್ತಿರುವ ಪುನಃಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಅಂಗವಾಗಿ ಸೋಮವಾರ ಸಂಜೆ ನಾಗಬ್ರಹ್ಮಾದಿ ಪರಿವಾರ ದೇವರ ಸನ್ನಿಧಿಯಲ್ಲಿ ನಾಗ ತನು ತರ್ಪಣ ಸೇವೆ ನಡೆಯಿತು.

Advertisement

ಕ್ಷೇತ್ರದ ತಂತ್ರಿ ವೇ| ಮೂ| ಕಳತ್ತೂರು ಉದಯ ತಂತ್ರಿಗಳ ನೇತೃತ್ವದಲ್ಲಿ, ಉಚ್ಚಿಲ ರಾಘವೇಂದ್ರ ಉಪಾಧ್ಯಾಯ ಅವರ ಪೌರೋಹಿತ್ಯದೊಂದಿಗೆ ಬೆಂಗಳೂರಿನ ಉದ್ಯಮಿ ಸುಭಾಸ್‌ ಶೆಟ್ಟಿಯವರ ಸೇವಾರ್ಥವಾಗಿ ನಾಗ- ತನು – ತರ್ಪಣದ ಧಾರ್ಮಿಕ ವಿಧಿ ವಿಧಾನ ನಡೆದವು.

ಜಲಂಚಾರು ಶ್ರೀ ಮಹಾಲಿಂಗೇಶ್ವರ -ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಘುರಾಮ ಶೆಟ್ಟಿ, ಕಾರ್ಯಾಧ್ಯಕ್ಷ ಪಂಜಿತ್ತೂರುಗುತ್ತು ರವಿರಾಜ ಶೆಟ್ಟಿ, ಕಾರ್ಯದರ್ಶಿ ವೇಣುಗೋಪಾಲ ತಂತ್ರಿ, ಕೋಶಾಧಿಕಾರಿ ಅರುಣ್‌ ಕುಮಾರ್‌ ಶೆಟ್ಟಿ ಪಂಜಿತ್ತೂರುಗುತ್ತು, ಆಡಳಿತ ಮೊಕ್ತೇಸರ ಗೋಪಾಲ ಶೆಟ್ಟಿ, ಗಣ್ಯರಾದ ಸುರೇಶ್‌ ಶೆಟ್ಟಿ ಗುರ್ಮೆ, ಅರುಣ್‌ ಶೆಟ್ಟಿ ಪಾದೂರು, ಮನೋಹರ್‌ ಶೆಟ್ಟಿ, ರತ್ನಾಕರ ವಿ. ಶೆಟ್ಟಿ, ಮುಂಬಯಿ, ಅವರಾಲು ಕಂಕಣಗುತ್ತು ಕೃಷ್ಣ ಶೆಟ್ಟಿ, ಲೀಲಾಧರ ಶೆಟ್ಟಿ, ಸುಬ್ರಹ್ಮಣ್ಯ ಐತಾಳ್‌, ಜಲಂಚಾರು ರಘುಪತಿ ತಂತ್ರಿ, ವ್ಯವಸ್ಥಾಪನ ಸಮಿತಿ, ಜೀರ್ಣೋದ್ದಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಪಂಜಿತ್ತೂರುಗುತ್ತು ಚಾರಿಟೆಬಲ್‌ ಟ್ರಸ್ಟ್‌ನ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next