Advertisement

ಕರಾಳ ದಿನಾಚರಣೆ-ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ; ಹುತಾತ್ಮರಿಗೆ ಪ್ರಧಾನಿ ಮೋದಿ ಗೌರವ

12:30 PM Apr 13, 2022 | Team Udayavani |

ನವದೆಹಲಿ: 1919ರಲ್ಲಿ ನಡೆದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಕರಾಳ ದಿನಾಚರಣೆ (ಏಪ್ರಿಲ್ 13) ಹಿನ್ನೆಲೆಯಲ್ಲಿ ಹುತಾತ್ಮರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. ಜಲಿಯನ್ ವಾಲಾ ಬಾಗ್ ಹುತಾತ್ಮರ ಧೈರ್ಯ ಮತ್ತು ತ್ಯಾಗ ಮುಂದಿನ ಪೀಳಿಗೆಗೆ ಸ್ಫೂರ್ತಿದಾಯಕ ಎಂದು ಪ್ರಧಾನಿ ಹೇಳಿದರು.

Advertisement

ಇದನ್ನೂ ಓದಿ:ಆಧಾರ ರಹಿತ ದೂರಿಗೆ ಮಾನ್ಯತೆ ಕೊಡಲು ಸಾಧ್ಯವೇ?: ಸಚಿವ ಡಾ. ಕೆ. ಸುಧಾಕರ್‌

“1919ರಲ್ಲಿನ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದ ಗೌರವ ಸಲ್ಲಿಸುವುದಾಗಿ” ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವೀಟರ್ ನಲ್ಲಿ ಉಲ್ಲೇಖಿಸಿದ್ದು, ಹುತಾತ್ಮರ ಧೈರ್ಯ, ತ್ಯಾಗ ಮುಂದಿನ ಜನಾಂಗಕ್ಕೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ನವೀಕರಣಗೊಂಡ ಜಲಿಯನ್ ವಾಲಾ ಬಾಗ್ ಸ್ಮಾರಕದ ಉದ್ಘಾಟನೆ ವೇಳೆ ಮಾಡಿದ ಭಾಷಣದ ಯೂಟ್ಯೂಬ್ ಲಿಂಕ್ ಅನ್ನು ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.

1919ರ ಏಪ್ರಿಲ್ 13ರಂದು ಪಂಜಾಬ್ ನ ಅಮೃತ್ ಸರದಲ್ಲಿರುವ ಜಲಿಯನ್ ವಾಲಾ ಬಾಗ್ ನಲ್ಲಿ ಅಂದಿನ ಬ್ರಿಟಿಷರ ರೌಲಟ್ ಕಾಯ್ದೆಯನ್ನು ವಿರೋಧಿಸಿ ಸಾವಿರಾರು ಮಂದಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಬ್ರಿಟಿಷ್ ಪಡೆಗಳು ಏಕಾಏಕಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರ ಮಾರಣಹೋಮ ನಡೆಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next