Advertisement

ಚಿಕ್ಕಪಡಸಲಗಿ ಬ್ಯಾರೇಜ್‌ಗೆ ನೀರು ಬಿಡಲು ಆಗ್ರಹ

06:22 PM Apr 11, 2020 | Naveen |

ಜಮಖಂಡಿ: ಹಿಪ್ಪರಗಿ ಜಲಾಶಯದಿಂದ ಚಿಕ್ಕಪಡಸಲಗಿ ಬ್ಯಾರೇಜ್‌ಗೆ ನೀರು ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಹಿಪ್ಪರಗಿ ನೀರಾವರಿ ಇಲಾಖೆ ಕಚೇರಿ ಆವರಣದಲ್ಲಿ ಶಾಸಕ ಆನಂದ ನ್ಯಾಮಗೌಡ ಪ್ರತಿಭಟನೆ ನಡೆಸಿದರು.

Advertisement

ಶಾಸಕರು ಮಾತನಾಡಿ, ನೀರಾವರಿ ಇಲಾಖೆ ಬೆಳಗಾವಿ ವಿಭಾಗೀಯ ಆಯುಕ್ತರಿಗೆ ಏ. 4ರಂದು ಮಧ್ಯಾಹ್ನ 2 ಗಂಟೆಗೆ 0.03 ಟಿಎಂಸಿ ನೀರು ಬಿಡುವಂತೆ ನಿರ್ದೇಶನ ನೀಡಿತ್ತು. ಆದರೆ, ಇದುವರೆಗೆ ನೀರು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು. ಹಿಪ್ಪರಗಿಯ ಸಹಾಯಕ ಅಭಿಯಂತರರು ನೀರು ಬಿಡಲು ಹಿಂದೇಟು ಹಾಕುತ್ತಿದ್ದಾರೆ. ಹಿಪ್ಪರಗಿ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ಶಾಸಕರು ಪೋನ್‌ ಮೂಲಕ ಡಿಸಿಎಂ ಗೋವಿಂದ ಕಾರಜೋಳ ಅವರೊಂದಿಗೆ ಚರ್ಚಿಸಿ ಅಧಿಕಾರಿಗಳ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿದರು.
ನಾಲ್ಕು ದಿನದಲ್ಲಿ ಹಿಪ್ಪರಗಿ ಜಲಾಶಯದಿಂದ ಚಿಕ್ಕಪಡಸಲಗಿ ಬ್ಯಾರೇಜ್‌ಗೆ ನೀರು ಹರಿಯಲಿದೆ ಎಂದು ಡಿಸಿಎಂ ಕಾರಜೋಳ, ಶಾಸಕರಿಗೆ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next