Advertisement
ಉತ್ತರಪ್ರದೇಶದಲ್ಲಿ ಅಲಿಗಢ್ ಮುಸ್ಲಿಮ್ ವಿವಿ, ಹೈದರಾಬಾದ್ ನಲ್ಲಿ ಮೌಲಾನ ಆಜಾದ್ ಉರ್ದು ಯೂನಿರ್ವಸಿಟಿ, ಬನಾರಾಸ್ ಹಿಂದೂ ಯೂನಿರ್ವಸಿಟಿಯಲ್ಲಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.
Related Articles
Advertisement
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೈಕ್ ರಾಲಿ ಅಥವಾ ಪ್ರತಿಭಟನೆ ನಡೆಸಲು ಅವಕಾಶ ಇಲ್ಲ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕೆಟಿ ಬಾಲಕೃಷ್ಣ ತಿಳಿಸಿದ್ದಾರೆ.
ಮೈಸೂರಿನ ಗಾಂಧಿ ಚೌಕ್, ಮಹಾವೀರ ವೃತ್ತ, ಪುರಭವನದ ಸುತ್ತಮುತ್ತ 500 ಮೀಟರ್ ನಿಷೇಧಾಜ್ಞೆ ಇಂದು ಮಧ್ಯರಾತ್ರಿ 12ಗಂಟೆವರೆಗೆ ಜಾರಿಯಲ್ಲಿರಲಿದೆ ಎಂದು ಹೇಳಿದರು.
ವಿವಿಧೆಡೆ ಪ್ರತಿಭಟನೆ:
ಹೈದರಾಬಾದ್ ನ ಮೌಲಾನ ಆಜಾದ್ ಉರ್ದು ಯೂನಿರ್ವಸಿಟಿ ಮತ್ತು ಬನಾರಸ್ ಹಿಂದೂ ಯೂನಿರ್ವಸಿಟಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೋಲ್ಕತಾದ ಜಾದವ್ ಪುರ್ ಯೂನಿರ್ವಸಿಟಿ ವಿದ್ಯಾರ್ಥಿಗಳು ಮಧ್ಯರಾತ್ರಿ ಮೆರವಣಿಗೆ ನಡೆಸಿದ್ದರು. ಅಲ್ಲದೇ ತಮ್ಮ ಪರೀಕ್ಷೆಗಳನ್ನು ಮುಂದೂಡುವಂತೆ ಮೌಲಾನ ಆಜಾದ್ ಉರ್ದು ವಿವಿ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.