Advertisement

ಕಾಶ್ಮೀರದಲ್ಲಿ ಟ್ರಕ್ ನಲ್ಲಿ ಬಂದಿದ್ದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

03:03 PM Dec 28, 2022 | Team Udayavani |

ಶ್ರೀನಗರ: ಭದ್ರತಾ ಪಡೆ ಭೀಕರ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಎನ್‌ ಕೌಂಟರ್‌ ಮಾಡಿದ್ದಾರೆ ಎಂದು ವರದಿಯಾಗಿದೆ.

Advertisement

ಬುಧವಾರ ಮುಂಜಾನೆ ಜಮ್ಮು ಕಾಶ್ಮೀರದ ಸಿದ್ರಾ ಪ್ರದೇಶದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಭದ್ರತಾ ಪಡೆ ಸಿಬ್ಬಂದಿಗಳು ಉಗ್ರರತ್ತ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಕೆಲ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆ ಸಿಬ್ಬಂದಿಗಳು ಎನ್‌ ಕೌಂಟರ್‌ ಮಾಡಿದ್ದಾರೆ.

ಪೊಲೀಸರು ಸಂಶಯಗೊಂಡು ಟ್ರಕ್‌ ವೊಂದನ್ನು ಸಿದ್ರಾ ಬಳಿ ನಿಲ್ಲಿಸಿ ಪರಿಶೀಲಿಸಿದಾಗ ಅದರ ಒಳಗಡೆ ಉಗ್ರರು ಅಡಗಿರುವುದು ಪತ್ತೆಯಾಗಿದೆ. ಸಿಬ್ಬಂದಿಗಳ ಮೇಲೆ ಇಬ್ಬರು ಉಗ್ರರು ಗುಂಡು ಹಾರಿಸಲು ಮುಂದಾಗಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿಗಳು ಗುಂಡು ಹಾರಿಸಿ ನಾಲ್ವರು ಉಗ್ರರನ್ನು ಎನ್‌ ಕೌಂಟರ್‌ ಮಾಡಲಾಗಿದೆ ಎಂದು ಎಡಿಜಿಪಿ ಮುಕೇಶ್‌ ಸಿಂಗ್‌ ಎನ್‌ ಐಗೆ ಹೇಳಿದ್ದಾರೆ.

ಇತ್ತೀಚೆಗೆ ಪೂಂಚ್ ನಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ಸಿಬ್ಬಂದಿಗಳು ಜಂಟಿ ಕಾರ್ಯಚರಣೆ ನಡೆಸಿ ಉಗ್ರರನ್ನು ಸೆರೆ ಹಿಡಿದು ಅವರಿಂದ ಪಿಸ್ತೂಲ್‌ ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next