Advertisement

ಫಲ ನೀಡದ ಪಾಕ್ ಕುಮ್ಮಕ್ಕು, ಜಮ್ಮು-ಕಾಶ್ಮೀರದಲ್ಲಿ ಒಂದೇ ಒಂದು ಸಾವು ಸಂಭವಿಸಿಲ್ಲ; ಬಿವಿಆರ್

09:06 AM Aug 17, 2019 | Nagendra Trasi |

ಶ್ರೀನಗರ್:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಕೇಂದ್ರ ಸರಕಾರ ನಿರ್ಬಂಧ ವಿಧಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಪಾಕಿಸ್ತಾನ ಕಣಿವೆ ರಾಜ್ಯದಲ್ಲಿ ಶಾಂತಿ ಕದಡಲು ಸಾಕಷ್ಟು ಪ್ರಯತ್ನ ನಡೆಸಿದ್ದರೂ ರಾಜ್ಯದಲ್ಲಿ ಒಂದೇ ಒಂದು ಜೀವಹಾನಿ ಸಂಭವಿಸಿಲ್ಲ ಎಂದು ಜಮ್ಮು-ಕಾಶ್ಮೀರ ಮುಖ್ಯ ಕಾರ್ಯದರ್ಶಿ ಬಿವಿಆರ್ ಸುಬ್ರಮಣ್ಯಂ ತಿಳಿಸಿದ್ದಾರೆ.

Advertisement

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಪರಿಸ್ಥಿತಿ ಸಂಪೂರ್ಣ ಶಾಂತವಾಗಿದ್ದು ಸಹಜ ಸ್ಥಿತಿಯಲ್ಲಿದೆ. ವಾರಂತ್ಯಕ್ಕೆ ಒಂದೊಂದೇ ಪ್ರದೇಶದಲ್ಲಿ ಶಾಲಾ, ಕಾಲೇಜು ಪುನರಾರಂಭಗೊಳ್ಳಲಿದೆ ಎಂದರು.

ಸಾರ್ವಜನಿಕ ಸಾರಿಗೆ ವ್ಯವಸ್ಥೆ ಆರಂಭಗೊಳ್ಳಲಿದ್ದು, ಇಂದಿನಿಂದ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲು ಆರಂಭಿಸಿರುವುದಾಗಿ ಮಾಹಿತಿ ನೀಡಿದರು. ಶ್ರೀನಗರದಲ್ಲಿ ದೂರವಾಣಿ, ಮೊಬೈಲ್ ಸೇವೆಯ ನಿರ್ಬಂಧವನ್ನು ನಿಧಾನಕ್ಕೆ ಸಡಿಲಗೊಳಿಸಿ, ಹಂತಹಂತವಾಗಿ ನಿರ್ಬಂಧ ತೆರವುಗೊಳಿಸುವುದಾಗಿ ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next