Advertisement

ಜಮ್ಮು-ಕಾಶ್ಮೀರ: ಭದ್ರತೆಗಾಗಿ ಉನ್ನತ ಮಟ್ಟದ ಸಭೆ

10:23 PM Aug 20, 2022 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಭಾಗದ ಜಿಲ್ಲೆಗಳಾದ ರಜೌರಿ ಮತ್ತು ಪೂಂಛ…ನಲ್ಲಿ ಉಗ್ರ ಚಟುವಟಿಕೆ ಹೆಚ್ಚಾಗಿರುವ ಬೆನ್ನಲ್ಲೇ ಉನ್ನತ ಮಟ್ಟದ ಭದ್ರತಾ ಸಭೆಯನ್ನು ಶನಿವಾರ ನಡೆಸಲಾಗಿದೆ.

Advertisement

ಜಮ್ಮುವಿನ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕರು, ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಅನೇಕರಿದ್ದ ಈ ಸಭೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಭದ್ರತೆ ಮತ್ತು ಉಗ್ರ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರ ಬಂಧನ: ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆ ಸಮಯದಲ್ಲಿ ಬುದ್ಗಾಮ್‌ ಜಿಲ್ಲೆಯ ಗೋಪಾಲಪೊರ ಚಂದೋರದಲ್ಲಿ ಗ್ರೆನೇಡ್‌ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಷ್ಕರ್‌-ಎ-ತೊಯ್ಬಾದ ಇಬ್ಬರು ಹೈಬ್ರಿಡ್‌ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.

ಸಾಹಿಲ್‌ ಅಹಮದ್‌ ವಾನಿ ಮತ್ತು ಅಲ್ತಾಫ್ ಫಾರೂಖ್‌ ಬಂಧಿತ ಉಗ್ರರು. ಈ ಇಬ್ಬರು ಗ್ರೆನೇಡ್‌ ದಾಳಿಯಲ್ಲಿ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿರುವುದಾಗಿಯೂ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next