Advertisement

ಭೂಕುಸಿತ; ಜಮ್ಮು-ಶ್ರೀನಗರ ಹೆದ್ದಾರಿ ಬಂದ್, ವೈಷ್ಣೋದೇವಿ ಯಾತ್ರಾರ್ಥಿಗಳ ಮಾರ್ಗ ಬದಲು

09:49 AM Aug 01, 2019 | Team Udayavani |

ನವದೆಹಲಿ: ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಜಮ್ಮು-ಶ್ರೀನಗರ್ ರಾಷ್ಟ್ರೀಯ ಹೆದ್ದಾರಿ ಬುಧವಾರ ಬಂದ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಜಮ್ಮು-ಕಾಶ್ಮೀರದ ಉದಾಂಪುರ್ ಜಿಲ್ಲೆಯ ಬಾಲ್ಲಿ ನಲ್ಲಾಹ್ ಸಮೀಪದ ಮೋರ್ರಾ ಪಾಸ್ಸಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿತ್ತು. ಇದರಿಂದಾಗಿ ವೈಷ್ಣೋದೇವಿ ಯಾತ್ರಾರ್ಥಿಗಳು ತೆರಳುವ ಮಾರ್ಗವನ್ನು ಬದಲಿಸಲಾಗಿದೆ ಎಂದು ವರಿ ವಿವರಿಸಿದೆ.

ಹವಾಮಾನ ವೈಪರೀತ್ಯದಿಂದಾಗಿ ಕಟ್ರಾ ಶಾನ್ ಜಿಚಾಟ್ ಸೆಕ್ಟರ್ ನಡುವಿನ ಹೆಲಿಕಾಪ್ಟರ್ ಸೇವೆಯನ್ನೂ ಕೂಡಾ ಸ್ಥಗಿತಗೊಳಿಸಲಾಗಿದೆ. ಭೂಕುಸಿತದಿಂದಾಗಿ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next