Advertisement

Jan 21ರಿಂದ 26; ಅತ್ತೂರು ಸಂತ ಲಾರೆನ್ಸ್‌ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

01:19 AM Jan 07, 2024 | Team Udayavani |

ಕಾರ್ಕಳ: ಸ್ಥಳೀಯ ಅತ್ತೂರು ಸಂತ ಲಾರೆನ್ಸ್‌ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ಜ. 21ರಿಂದ 26ರ ವರೆಗೆ ಜರಗಲಿದೆ.

Advertisement

ಕೇಳಿರಿ ನಿಮಗೆ ಕೊಡಲಾಗುವುದು ಎಂಬ ಮಹೋತ್ಸವದ ವಿಷಯದೊಂದಿಗೆ ನಡೆಯುವ ಈ 6 ದಿನಗಳ ಉತ್ಸವದ ಅವಧಿಯಲ್ಲಿ ಒಟ್ಟು 48 ಬಲಿ ಪೂಜೆಗಳು ನಡೆಯಲಿವೆ. ಜ. 21ರ ಸಾಯಂಕಾಲ 4.30ಕ್ಕೆ (ಕೊಂಕಣಿ) ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಆಲೋಶಿಯಸ್‌ ಪಾವ್ಲ್ ಡಿ’ಸೋಜಾ ನೆರವೇರಿಸಲಿರುವರು.

ಜ. 22ರಂದು ಸಾಯಂಕಾಲ 6ಕ್ಕೆ (ಕನ್ನಡ) ಶಿವಮೊಗ್ಗದ ಧರ್ಮಾಧ್ಯಕ್ಷ ರೈ| ರೆ| ಡಾ| ಫ್ರಾನ್ಸಿಸ್‌ ಸೆರಾವೊ ಇವರು ನಡೆಸುವರು. ಜ. 23ರಂದು ಸಾಯಂಕಾಲ 5.30ಕ್ಕೆ (ಕನ್ನಡ) ಪುತ್ತೂರಿನ ಧರ್ಮಾಧ್ಯಕ್ಷ ರೈ| ರೆ| ಡಾ| ಜೀವರ್ಗಿಸ್‌ ಮಾರ್‌ ಮಕಾರಿಯೊಸ್‌, ಜ. 24ರಂದು ಬೆಳಗ್ಗೆ 10ಕ್ಕೆ (ಕೊಂಕಣಿ) ಉಡುಪಿಯ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೊ, ಜ.25ರಂದು ಬೆಳಗ್ಗೆ 10ಕ್ಕೆ (ಕೊಂಕಣಿ) ಮಂಗಳೂರಿನ ಧರ್ಮಾಧ್ಯಕ್ಷ ರೈ| ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ, ಜ. 26ರಂದು ಬೆಳಗ್ಗೆ 10ಕ್ಕೆ (ಕನ್ನಡ) ಬೆಳ್ತಂಗಡಿ ಧರ್ಮಾಧ್ಯಕ್ಷ ರೈ| ರೆ| ಡಾ| ಲೊರೆನ್ಸ್‌ ಮುಕ್ಕುಝಿ ಅವರು ಪ್ರಧಾನ ಯಾಜಕರಾಗಿ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನೆರವೇರಿಸಲಿರುವರು ಎಂದು ಕ್ಷೇತ್ರದ ವಂ| ಅಲ್ಬನ್‌ ಡಿ’ಸೋಜಾ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next