Advertisement

ಜ.23: ಪಂಚಾಯತ್‌ ವ್ಯವಸ್ಥೆ ಸಬಲೀಕರಣಕ್ಕಾಗಿ ಆಗ್ರಹಿಸಿ ಧರಣಿ

06:20 AM Jan 19, 2018 | Team Udayavani |

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ ಸಮಸ್ಯೆಗಳ ಬಗ್ಗೆ  ಸರ್ಕಾರದ ಗಮನ ಸೆಳೆಯಲು ಜ.23ರಂದು ಧರಣಿ ನಡೆಸಲಾಗುವುದು ಎಂದು ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Advertisement

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚಾಯತ್‌ ವ್ಯವಸ್ಥೆಯ ಸಬಲೀಕರಣಕ್ಕಾಗಿ ಒತ್ತಾಯಿಸಿ ಮತ್ತು ಅಧಿಕಾರ ವಿಕೇಂದ್ರಿಕರಣದ ಅನುಷ್ಟಾನ ಸೇರಿ 30ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿಧಾನಸೌಧ ಮತ್ತು ವಿಕಾಸಸೌಧ ನಡುವಿನ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ವಿಧಾನಪರಿಷತ್‌ ಸದಸ್ಯರಾದ ಎಂ.ಕೆ.ಪ್ರಾಣೇಶ್‌, ಸುನಿಲ್‌ ಸುಬ್ರಹ್ಮಣ್ಯ, ಬಿ.ಜಿ.ಪಾಟೀಲ್‌ ಸೇರಿದಂತೆ ಇತರೆ ಜನಪ್ರತಿನಿಧಿಗಳು ಧರಣಿಯಲ್ಲಿ ಪಾಲ್ಗೊಳ್ಳಲಿದ್ದು ಈ ಸಂಬಂಧ ಅನುಮತಿಗಾಗಿ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಅವರಿಗೆ ಮನವಿ ಮಾಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next