Advertisement

ಜ.11ರಿಂದ 13ರ ವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಜನಸೇವಕ ಸಮಾವೇಶ: ಮಹೇಶ ಟೆಂಗಿನಕಾಯಿ

12:24 PM Jan 09, 2021 | Team Udayavani |

ಹುಬ್ಬಳ್ಳಿ: ಗ್ರಾ.ಪಂ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತ ಸದಸ್ಯರನ್ನು ಸನ್ಮಾನಿಸುವುದಕ್ಕಾಗಿ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಜನಸೇವಕ ಸಮಾವೇಶವನ್ನು ಜ.11ರಿಂದ 13ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 17ರಂದು ಮಧ್ಯಾಹ್ನ  ಮೂರು ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ ಎಂದರು.

ಜ. 11ರಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಮಾವೇಶಕ್ಕೆ ಚಾಲನೆ ನೀಡುವರು. ಪ್ರತಿದಿನ ಎರಡು ಜಿಲ್ಲೆಗಳಲ್ಲಿ ಎರಡು ಸಮಾವೇಶ ನಡೆಯಲಿವೆ. ಜನಸೇವಕ ಸಮಾವೇಶಕ್ಕಾಗಿ ಐದು ತಂಡಗಳನ್ನು ರಚಿಸಲಾಗಿದೆ. ಮುಂದಿನ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಸಿದ್ಧತೆಗೂ ಈ ಸಮಾವೇಶದ ಮೂಲಕ ಚಾಲನೆ ನೀಡಲಾಗುವುದು.

ಇದನ್ನೂ ಓದಿ:ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸ್ಪಂದಿಸಲಿ : ಒಕ್ಕೂಟದ ಅಧ್ಯಕ್ಷ ಎಚ್‌.ಟಿ.ಮೋಹನ್‌ ಆತಂಕ

ಧಾರವಾಡ ಜಿಲ್ಲೆಯ ಜನಸೇವಕ ಸಮಾವೇಶ ಜ. 10ರಂದು ಬೆಳಗ್ಗೆ 11ಕ್ಕೆ ಹುಬ್ಬಳ್ಳಿಯ ಗೋಕುಲ ಗಾರ್ಡನ್ ದಲ್ಲಿ ನಡೆಯಲಿದೆ. ಬಿಜೆಪಿ ಬೆಂಬಲಿತ ಗ್ರಾಪಂನ ನೂತನ 1,216 ಸದಸ್ಯರು ಪಾಲ್ಗೊಳ್ಳುವರು ಎಂದರು

Advertisement
Advertisement

Udayavani is now on Telegram. Click here to join our channel and stay updated with the latest news.

Next