Advertisement

ಖ್ಯಾತ ಯಕ್ಷಗಾನ ಸಾಧಕ ಪಡುಮಲೆ ಅವರಿಗೆ ಜಾನಪದ ಲೋಕ ಪ್ರಶಸ್ತಿ

09:20 AM Feb 10, 2018 | Karthik A |

ಬದಿಯಡ್ಕ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಹಾಗೂ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮತ್ತು ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಫೆ. 10 ಹಾಗೂ 11ರಂದು ರಾಮನಗರದ ಜಾನಪದ ಲೋಕದಲ್ಲಿ ಪ್ರವಾಸಿ ಜಾನಪದ ಲೋಕೋತ್ಸವ 2018 ಕಾರ್ಯಕ್ರಮ ಆಯೋಜಿಸಿದೆ. ಸಮಾರಂಭದ ಅಂಗವಾಗಿ ಫೆ. 11ರಂದು ಸಂಜೆ 5.30 ರಿಂದ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನದ ಹಿರಿಯ ಖ್ಯಾತ ವೇಷಧಾರಿ ಜಯರಾಮ ಪಾಟಾಳಿ ಪಡುಮಲೆಯವರಿಗೆ ಪ್ರಸಕ್ತಸಾಲಿನ ಜಾನಪದ ಲೋಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಆದಿಚುಂಚನಗಿರಿ ಮಹಾಸಂಸ್ಥಾನದ ಡಾ| ನಿರ್ಮಲಾನಂದ ಶ್ರೀಗಳ ಉಪಸ್ಥಿತಿಯಲ್ಲಿ ಬೆಂಗಳೂರು ಕೃಷಿಕ್‌ ಸರ್ವೋದಯ ಫೌಂಡೇಶನ್‌ ಅಧ್ಯಕ್ಷ ಡಾ| ವೈ.ಕೆ. ಪುಟ್ಟಸೋಮೇ ಗೌಡ ಪ್ರಶಸ್ತಿ ಪ್ರದಾನಗೈಯುವರು.

Advertisement

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಧಾನ ಪರಿಷತ್‌ ಸದಸ್ಯ ವಿ. ಸೋಮಣ್ಣ, ಕರ್ನಾಟಕದ ಪ್ರವಾಸೋದ್ಯಮ ಇಲಾಖೆಯ ಅಧ್ಯಕ್ಷೆ ಎನ್‌. ಮಂಜುಳಾ, ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಟಿ. ತಿಮ್ಮೇಗೌಡ ಮೊದಲಾದವರು ಉಪಸ್ಥಿತರಿರುವರು. ಕರ್ನಾಟಕ ಜಾನಪದ ಪರಿಷತ್‌ ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಎ.ಆರ್‌. ಸುಬ್ಬಯ್ಯಕಟ್ಟೆ  ಜಯರಾಮ ಪಾಟಾಳಿಯವರನ್ನು ಪ್ರಶಸ್ತಿಗೆ ಶಿಫಾರಸು ಮಾಡಿರುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next