Advertisement

ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದಂತೆ; ಜನಾರ್ದನ ಪೂಜಾರಿ

12:15 PM Jan 30, 2017 | Team Udayavani |

ಮಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದಂತೆ. ಸಿದ್ದರಾಮಯ್ಯನವರ ಅಹಂಕಾರ ಮಿತಿಮೀರಿದೆ. ಅದಕ್ಕೆ ನಾವೆಲ್ಲರೂ ಸೇರಿ ಕಡಿವಾಣ ಹಾಕಬೇಕಿದೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Advertisement

ಎಸ್.ಎಂ.ಕೃಷ್ಣ ರಾಜೀನಾಮೆ ಹಿನ್ನೆಲೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಸ್.ಎಂ.ಕೃಷ್ಣ ಅವರನ್ನು ನಡೆಸಿಕೊಂಡ ರೀತಿ ಸರಿ ಇಲ್ಲ ಎಂದರು.

ರಾಜ್ಯದಲ್ಲಿ ಇರುವುದು ಕಾಂಗ್ರೆಸ್ ಪಕ್ಷದ ಸರ್ಕಾರವಲ್ಲ, ರಾಜ್ಯದಲ್ಲಿ ಇರುವುದು ಜನತಾದಳದ ಸರ್ಕಾರ ಎಂದು ಅವರು ವ್ಯಂಗ್ಯವಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next